ನೂತನ ಸಂಸತ್ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ.
ಭದ್ರತಾ ಲೋಪವನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರಣ ಈ ಸಂಸದರ ಅಮಾನತ್ತಾಗಿದೆ ಎಂದು ತಿಳಿದುಬಂದಿದ್ದು, ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ದರು ಎನ್ನಲಾಗಿದೆ.
ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಮಂಗಳವಾರ ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಬುಧವಾರ ಕೇರಳದ ಇಬ್ಬರು ಸಂಸದರ ಅಮಾನತು ಜರುಗಿತು. ಇಂದು ಮೂವರ ಅಮಾನತ್ತಾಗಿದ್ದು ಸದ್ಯ ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…