ರಾಷ್ಟ್ರೀಯ

ಲಂಕಾ ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ: ಶಾಶ್ವತ ಪರಿಹಾರ ಕೋರಿ ಕೇಂದ್ರಕ್ಕೆ ಸ್ಟಾಲಿನ್ ಪತ್ರ

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.

ಈ ತಿಂಗಳೊಂದರಲ್ಲೇ ರಾಜ್ಯದ 10 ಮೀನುಗಾರಿಕಾ ದೋಣಿಗಳನ್ನು ಮತ್ತು 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ಅಕ್ಟೋಬರ್ 28 ರಂದು ಶ್ರೀಲಂಕಾ ನೌಕಾಪಡೆಯಿಂದ 37 ಮೀನುಗಾರರು ಮತ್ತು ಅವರ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಮಗೆ ತಿಳಿದಿರುವಂತೆ, ನಮ್ಮ ಮೀನುಗಾರರು ಜೀವನೋಪಾಯಕ್ಕಾಗಿ ಮೀನುಗಾರಿಕೆ ಚಟುವಟಿಕೆಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಅವರು ಆಗಾಗ್ಗೆ ಬಂಧನಕ್ಕೊಳಗಾಗುತ್ತಿದ್ದು, ಇದು ಅವರ ಸಮುದಾಯಕ್ಕೆ ಅಪಾರವಾದ ಸಂಕಟ ಮತ್ತು ನೋವನ್ನು ಉಂಟುಮಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

4 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

4 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

4 hours ago