ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.
ಈ ತಿಂಗಳೊಂದರಲ್ಲೇ ರಾಜ್ಯದ 10 ಮೀನುಗಾರಿಕಾ ದೋಣಿಗಳನ್ನು ಮತ್ತು 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ಅಕ್ಟೋಬರ್ 28 ರಂದು ಶ್ರೀಲಂಕಾ ನೌಕಾಪಡೆಯಿಂದ 37 ಮೀನುಗಾರರು ಮತ್ತು ಅವರ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಮಗೆ ತಿಳಿದಿರುವಂತೆ, ನಮ್ಮ ಮೀನುಗಾರರು ಜೀವನೋಪಾಯಕ್ಕಾಗಿ ಮೀನುಗಾರಿಕೆ ಚಟುವಟಿಕೆಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಅವರು ಆಗಾಗ್ಗೆ ಬಂಧನಕ್ಕೊಳಗಾಗುತ್ತಿದ್ದು, ಇದು ಅವರ ಸಮುದಾಯಕ್ಕೆ ಅಪಾರವಾದ ಸಂಕಟ ಮತ್ತು ನೋವನ್ನು ಉಂಟುಮಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…