ರಾಷ್ಟ್ರೀಯ

ಪ್ರಪಂಚದ ಬಲಿಷ್ಠ ಸೇನೆ ಪಟ್ಟಿಯಲ್ಲಿ ಭಾರತಕ್ಕೆ ೪ನೇ ಸ್ಥಾನ!

2024ನೇ ಸಾಲಿನ ವಿಶ್ವದ ಅತ್ಯಂತ ಬಲಿಷ್ಠ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನ ಪಡೆದಿದೆ.

ಗ್ಲೋಬಲ್ ಫೈರ್ ಪವರ್ 145 ದೇಶಗಳ ಸೇನಾ ಸಾಮರ್ಥ್ಯ ಕುರಿತು ಸಮೀಕ್ಷೆ ನಡೆಸಿದ್ದು, ಸೇನಾ ತುಕಡಿಗಳ ಸಂಖ್ಯೆ, ಸೇನಾ ಉಪಕರಣಗಳು, ಹಣಕಾಸು ಸ್ಥಿರತೆ, ಭೂಮಿಯ ವಿಸ್ತಾರ ಮತ್ತು ಸಂಪನ್ಮೂಲ ಸೇರಿದಂತೆ 60 ವಿಷಯಗಳ ಆಧಾರದ ಮೇಲೆ ಸ್ಥಾನ  ನೀಡಲಾಗಿದೆ.

ಗ್ಲೋಬರ್ ಫೈರ್ ಪವರ್ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ದೇಶದ ಅತ್ಯಂತ ಬಲಿಷ್ಠ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ರಷ್ಯಾ ಮತ್ತು ಚೀನಾ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನ ಗಳಿಸಿದೆ. ದಕ್ಷಿಣ ಕೊರಿಯಾ 5ನೇ ಸ್ಥಾನ ಪಡೆಯುವ ಮೂಲಕ ಟಾಪ್ 5ನಲ್ಲಿ ಸ್ಥಾನದಲ್ಲಿದೆ.

ಯುನೈಟೆಡ್ ಕಿಂಗ್ಡಮ್ (ಬ್ರಿಟನ್), ಜಪಾನ್, ಟರ್ಕಿ, ಪಾಕಿಸ್ತಾನ ಮತ್ತು ಇಟಲಿ ಕ್ರಮವಾಗಿ 5ರಿಂದ 10ನೇ ಸ್ಥಾನ ಪಡೆದಿದೆ. ಭಾರತದ ನೆರೆಯ ದೇಶಗಳಾದ ಪಾಕಿಸ್ತಾನ 9ನೇ ಸ್ಥಾನದಲ್ಲಿದ್ದರೆ, ಚೀನಾ ಮೂರನೇ ಸ್ಥಾನ ಗಳಿಸಿದೆ.

ಅತ್ಯಂತ ದುರ್ಬಲ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭೂತಾನ್ ಅಗ್ರಸ್ಥಾನದಲ್ಲಿದೆ. ಮಾಲ್ಡೋವಾ, ಸುರಿನೇಮ್, ಸೊಮಾಲಿಯಾ, ಬೆನಿನ್, ಲಿಬಿರಿಯಾ, ಬೆಲಿಜ್, ಸಿಯಾರಾ ಲಿಯೊನ್, ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಐಸ್ ಲ್ಯಾಂಡ್ ನಂತರದ ಸ್ಥಾನದಲ್ಲಿವೆ.

andolanait

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

12 mins ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

18 mins ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

41 mins ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

47 mins ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

2 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

2 hours ago