ರಾಷ್ಟ್ರೀಯ

ಪ್ರಪಂಚದ ಬಲಿಷ್ಠ ಸೇನೆ ಪಟ್ಟಿಯಲ್ಲಿ ಭಾರತಕ್ಕೆ ೪ನೇ ಸ್ಥಾನ!

2024ನೇ ಸಾಲಿನ ವಿಶ್ವದ ಅತ್ಯಂತ ಬಲಿಷ್ಠ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನ ಪಡೆದಿದೆ.

ಗ್ಲೋಬಲ್ ಫೈರ್ ಪವರ್ 145 ದೇಶಗಳ ಸೇನಾ ಸಾಮರ್ಥ್ಯ ಕುರಿತು ಸಮೀಕ್ಷೆ ನಡೆಸಿದ್ದು, ಸೇನಾ ತುಕಡಿಗಳ ಸಂಖ್ಯೆ, ಸೇನಾ ಉಪಕರಣಗಳು, ಹಣಕಾಸು ಸ್ಥಿರತೆ, ಭೂಮಿಯ ವಿಸ್ತಾರ ಮತ್ತು ಸಂಪನ್ಮೂಲ ಸೇರಿದಂತೆ 60 ವಿಷಯಗಳ ಆಧಾರದ ಮೇಲೆ ಸ್ಥಾನ  ನೀಡಲಾಗಿದೆ.

ಗ್ಲೋಬರ್ ಫೈರ್ ಪವರ್ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ದೇಶದ ಅತ್ಯಂತ ಬಲಿಷ್ಠ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ರಷ್ಯಾ ಮತ್ತು ಚೀನಾ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದರೆ, ಭಾರತ 4ನೇ ಸ್ಥಾನ ಗಳಿಸಿದೆ. ದಕ್ಷಿಣ ಕೊರಿಯಾ 5ನೇ ಸ್ಥಾನ ಪಡೆಯುವ ಮೂಲಕ ಟಾಪ್ 5ನಲ್ಲಿ ಸ್ಥಾನದಲ್ಲಿದೆ.

ಯುನೈಟೆಡ್ ಕಿಂಗ್ಡಮ್ (ಬ್ರಿಟನ್), ಜಪಾನ್, ಟರ್ಕಿ, ಪಾಕಿಸ್ತಾನ ಮತ್ತು ಇಟಲಿ ಕ್ರಮವಾಗಿ 5ರಿಂದ 10ನೇ ಸ್ಥಾನ ಪಡೆದಿದೆ. ಭಾರತದ ನೆರೆಯ ದೇಶಗಳಾದ ಪಾಕಿಸ್ತಾನ 9ನೇ ಸ್ಥಾನದಲ್ಲಿದ್ದರೆ, ಚೀನಾ ಮೂರನೇ ಸ್ಥಾನ ಗಳಿಸಿದೆ.

ಅತ್ಯಂತ ದುರ್ಬಲ ಸೇನೆ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭೂತಾನ್ ಅಗ್ರಸ್ಥಾನದಲ್ಲಿದೆ. ಮಾಲ್ಡೋವಾ, ಸುರಿನೇಮ್, ಸೊಮಾಲಿಯಾ, ಬೆನಿನ್, ಲಿಬಿರಿಯಾ, ಬೆಲಿಜ್, ಸಿಯಾರಾ ಲಿಯೊನ್, ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಐಸ್ ಲ್ಯಾಂಡ್ ನಂತರದ ಸ್ಥಾನದಲ್ಲಿವೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago