ರಾಷ್ಟ್ರೀಯ

ರೈತರಿಗೆ 5 ಗಂಟೆ ವಿದ್ಯುತ್: ಡಿಕೆ ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರ ಕಿಡಿ

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣಾ ಸಮರ ಕಾವೇರಿದ್ದು, ರಾಜಕೀಯ ನಾಯಕರು ಬಿರುಸಿನ ಪ್ರಚಾರ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ತೆಲಂಗಾಣದಲ್ಲಿ ಹಸ್ತವನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಕೈನಾಯಕರು ಪಕ್ಕದ ಕರ್ನಾಟಕದ ನಾಯಕರ ನೆರವು ಪಡೆದಿದ್ದಾರೆ.

ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತರಿಗೆ ಐದು ಗಂಟೆ ವಿದ್ಯುತ್ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಯು ಕಾಂಗ್ರೆಸ್ ನಾಯಕರಿಗೆ ಇರಿಸು-ಮುರಿಸು ಉಂಟು ಮಾಡಿದೆ.

ಚುನಾವಣೆಗೆ ಮುನ್ನ ವಿದ್ಯುತ್ ಪೂರೈಕೆಯಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಪ್ರಮುಖ ನಾಯಕರು ಇಂತಹ ಕಾಮೆಂಟ್‌ಗಳನ್ನು ಮಾಡಿರುವುದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಡಿಕೆ ಶಿವಕುಮಾರ್  ಹೇಳಿಕೆಯ ಲಾಭ ಪಡೆದ ಬಿಆರ್‌ಎಸ್ ನಾಯಕರು ಈ ವಿಷಯದ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದಾರೆ. ಐದು ಗಂಟೆ ವಿದ್ಯುತ್ ಸರಬರಾಜು ಮಾಡುವ ಪಕ್ಷವನ್ನು ಬೆಂಬಲಿಸಬೇಕೇ ಅಥವಾ ರಾತ್ರಿಯಿಡೀ ವಿದ್ಯುತ್ ನೀಡುವ ಪಕ್ಷವನ್ನು ಬೆಂಬಲಿಸಬೇಕೇ ಎಂದು ನಿರ್ಧರಿಸಲು ಜನರಿಗೆ ಮನವಿ ಮಾಡಿದ್ದಾರೆ.

ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ನಿಲುವುಗಳನ್ನು ಜನರಿಗೆ ವಿವರಿಸಿ, ಈ ಸೂಕ್ಷ್ಮ ವಿಷಯ ರೈತ ಸಮುದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ, ಹೀಗಾಗಿ ಸಮಸ್ಯೆಯನ್ನು ಮುಕ್ತಗೊಳಿಸಲು ಪ್ರಯತ್ನಿಸಬೇಕು ಮತ್ತು ಎಲ್ಲವನ್ನುಅರ್ಥವಾಗುವ ರೀತಿ ವಿವರಿಸಬೇಕು, ಇಲ್ಲದಿದ್ದರೆ, ಪಕ್ಷದ ಚುನಾವಣಾ ಭವಿಷ್ಯವು ಪರಿಣಾಮ ಬೀರುತ್ತದೆ ಎಂದು  ರಾಜಕೀಯ ವೀಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ಹಿರಿಯ ನಾಯಕರು ಕಾಂಗ್ರೆಸ್ ಸ್ಟಾರ್ ಪ್ರಚಾರಕರಿಗೆ ವಿದ್ಯುತ್, ನೀರು, ರೈತ ಬಂಧು ಮತ್ತು ಇತರ ಯೋಜನೆಗಳಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡದೆ ಪಕ್ಷದ ಆರು ಭರವಸೆಗಳ ಮೇಲೆ ಗಮನ ಕೇಂದ್ರೀಕರಿಸುವಂತೆ ಸಲಹೆ ನೀಡುತ್ತಿದ್ದಾರೆ.

ಈ ಹಿಂದೆ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದರು. ಅಮೇರಿಕಾದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ರಾಜ್ಯದ ರೈತರಿಗೆ ಮೂರು ಗಂಟೆ ವಿದ್ಯುತ್ ಸಾಕು ಎಂದು ಹೇಳಿದ್ದರು, ಈ ಹೇಳಿಕೆ ಬಿಆರ್‌ಎಸ್ ನಾಯಕರಿಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು  ಅವಕಾಶ ಕಲ್ಪಿಸಿಕೊಟ್ಟಂತಾಗಿತ್ತು.

ಅಧಿಕಾರಕ್ಕೆ ಬಂದರೆ ಎಲ್ಲಾ ಯೋಜನೆಗಳನ್ನು ನಿಲ್ಲಿಸುವುದಾಗಿ ಹೇಳುತ್ತಲೇ ಆಡಳಿತ ಪಕ್ಷದ ನಾಯಕರು ಕಾಂಗ್ರೆಸ್ ಅನ್ನು ರೈತ ವಿರೋಧಿ ಪಕ್ಷ ಎಂದು ಬಿಂಬಿಸಿದರು. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಸಚಿವರಾದ ಕೆ.ಟಿ.ರಾಮರಾವ್, ಟಿ.ಹರೀಶ್ ರಾವ್ ಮತ್ತು ಎಂಎಲ್ ಸಿ ಕವಿತಾ ಅವರು ಕಾಂಗ್ರೆಸ್ ಅನ್ನು ನಿರಂತರವಾಗಿ ಟೀಕಿಸುತ್ತಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡುತ್ತಿದೆ. ಅಲ್ಲದೆ ಅಧಿಕಾರಕ್ಕೆ ಬಂದಾಗಿನಿಂದಲೂ ತನ್ನ ಅಸಮರ್ಥತೆಯನ್ನು ಜಗಜ್ಜಾಹೀರು ಮಾಡಿದೆ ಎಂದು ತೆಲಂಗಾಣದ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ.ರಾಮರಾವ್ ಟೀಕಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ತಾಂಡೂರು ಮತ್ತು ಪರಿಗಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಆರ್‌ಎಸ್ ಸರ್ಕಾರದ ವಿರುದ್ಧ ಕರ್ನಾಟಕಕ್ಕೆ ಬನ್ನಿ, ರಾಜ್ಯದ ಅಭಿವೃದ್ದಿ ನೋಡಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲಿಗೆ ತಿರುಗೇಟು ನೀಡಿರುವ ಅವರು, ಗ್ಯಾರಂಟಿಗಳನ್ನು ಜಾರಿಗೆ ತಂದು ರೈತರನ್ನೂ ಸೇರಿದಂತೆ ಇಡೀ ರಾಜ್ಯವನ್ನು ಕತ್ತಲೆಗೆ ನೂಕಿದೆ. ಅಲ್ಲದೆ ನಿಮ್ಮ ರಾಜ್ಯವೇ ಅನೇಕ ಸಮಸ್ಯೆಗಳಿಂದ ಬಳಲುತ್ತಿರುವಾಗ ನೀವು ನಮ್ಮಲ್ಲಿ ಹೇಗೆ ಮತ ಕೇಳಲು ಬಂದಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago