ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಹಿಂದಿನಿಂದಲೂ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಲೆ ಬರುತ್ತಿದೆ. ಕರುಣಾನಿಧಿ ಅವರಿಂದ ಹಿಡಿದು, ಉದಯನಿಧಿ ಸ್ಟಾಲಿನ್ ವೆರೆಗೂ ಸನಾತನ ಧರ್ಮವನ್ನು ವಿರೋಧಿಸಿದ ಹಲವಾರು ಪ್ರಕರಣಗಳು ಕಣ್ಣಮುಂದಿದೆ. ಈ ಮಧ್ಯೆ ಸ್ಟಾಲಿನ್ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ನೀಡಲಾಗಿದ್ದು, ಅದರಲ್ಲಿ ಜೈ ಶ್ರೀರಾಮ್ ಎಂದು ಬರೆಯಲಾಗಿದೆ.
613 ಕೆ.ಜಿ ತೂಕದ ಗಂಟೆಯನ್ನು ತಮಿಳುನಾಡು ಸಂಸದೆ ಕನಿಮೋಳಿ ಅವರ ಕುಟುಂಬ ಸದಸ್ಯರು ಕಳುಹಿಸಿದ್ದಾರೆ ಎಂದು ಅದರಲ್ಲಿ ಬರೆಯಲಾಗಿದೆ. ಆ ಗಂಟೆಯನ್ನು ಬಾರಿಸಿದಾಗ ಓಂಕಾರ ಹೊರ ಹೊಮ್ಮುತ್ತದೆ. ಈ ಗಂಟೆಯಿಂದ ಹೊರಹೊಮ್ಮುವ ಓಂ ಶ್ರೀರಾಮನ ನೆಲೆಯಲ್ಲಿ ಅವರ ಆರಾಧ್ಯ ದೈವವಾದ ಮಹಾದೇವನ ಉಪಸ್ಥಿತಿಯನ್ನು ಕೂಡಾ ಪ್ರತಿಧ್ವನಿಸುತ್ತದೆ ಎಂದು ಹೇಳಲಾಗುತ್ತದೆ.
ಕನಿಮೊಳಿ ಯಾರು? : ಡಿಎಂಕೆ ಸಂಸದೆ ಕನಿಮೊಳಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಲಸಹೋದರಿ. ಕನಿಮೊಳಿ ಅವರ ಪತಿ ಸಿಂಗಾಪುರದ ಪ್ರಜೆ. ಕಳೆದ ವರ್ಷದವರೆಗೂ ಅವರ ಬಳಿ ಪಾನ್ ಕಾರ್ಡ್ ಇರಲಿಲ್ಲ ಎನ್ನುವುದು ಗಮನಿಸಬೇಕಾದ ಅಂಶ.
ಡಿಎಂಕೆ ನಾಯಕ ಉದಯನಿಧಿ ಮತ್ತೊಮ್ಮೆ ಸನಾತನ ಸಂಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಸನಾತನ ಧರ್ಮವನ್ನು ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಕ್ಕೆ ಹೋಲಿಸಿದ್ದರು. ಈ ಹೇಳಿಕೆ ಭಾರೀ ವಿವಾದ ಉಂಟು ಮಾಡಿದ ಮೇಲೆಯೂ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದಿದ್ದರು. ಇದರ ನಡುವೆ ಕನಿಮೊಳಿ ಕುಟುಂಬದವರು ರಾಮ ಮಂದಿರಕ್ಕೆ ಗಂಟೆ ಉಡುಗೊರೆಯಾಗಿ ನೀಡಿದ್ದು, ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…