ರಾಷ್ಟ್ರೀಯ

ಕನ್ನಿಮೋಳಿ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ಅರ್ಪಣೆ

ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಹಿಂದಿನಿಂದಲೂ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಲೆ ಬರುತ್ತಿದೆ. ಕರುಣಾನಿಧಿ ಅವರಿಂದ ಹಿಡಿದು, ಉದಯನಿಧಿ ಸ್ಟಾಲಿನ್‌ ವೆರೆಗೂ ಸನಾತನ ಧರ್ಮವನ್ನು ವಿರೋಧಿಸಿದ ಹಲವಾರು ಪ್ರಕರಣಗಳು ಕಣ್ಣಮುಂದಿದೆ. ಈ ಮಧ್ಯೆ ಸ್ಟಾಲಿನ್‌ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ನೀಡಲಾಗಿದ್ದು, ಅದರಲ್ಲಿ ಜೈ ಶ್ರೀರಾಮ್‌ ಎಂದು ಬರೆಯಲಾಗಿದೆ.

613 ಕೆ.ಜಿ ತೂಕದ ಗಂಟೆಯನ್ನು ತಮಿಳುನಾಡು ಸಂಸದೆ ಕನಿಮೋಳಿ ಅವರ ಕುಟುಂಬ ಸದಸ್ಯರು ಕಳುಹಿಸಿದ್ದಾರೆ ಎಂದು ಅದರಲ್ಲಿ ಬರೆಯಲಾಗಿದೆ. ಆ ಗಂಟೆಯನ್ನು ಬಾರಿಸಿದಾಗ ಓಂಕಾರ ಹೊರ ಹೊಮ್ಮುತ್ತದೆ. ಈ ಗಂಟೆಯಿಂದ ಹೊರಹೊಮ್ಮುವ ಓಂ ಶ್ರೀರಾಮನ ನೆಲೆಯಲ್ಲಿ ಅವರ ಆರಾಧ್ಯ ದೈವವಾದ ಮಹಾದೇವನ ಉಪಸ್ಥಿತಿಯನ್ನು ಕೂಡಾ ಪ್ರತಿಧ್ವನಿಸುತ್ತದೆ ಎಂದು ಹೇಳಲಾಗುತ್ತದೆ.

ಕನಿಮೊಳಿ ಯಾರು? : ಡಿಎಂಕೆ ಸಂಸದೆ ಕನಿಮೊಳಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಲಸಹೋದರಿ. ಕನಿಮೊಳಿ ಅವರ ಪತಿ ಸಿಂಗಾಪುರದ ಪ್ರಜೆ. ಕಳೆದ ವರ್ಷದವರೆಗೂ ಅವರ ಬಳಿ ಪಾನ್ ಕಾರ್ಡ್ ಇರಲಿಲ್ಲ ಎನ್ನುವುದು ಗಮನಿಸಬೇಕಾದ ಅಂಶ.

ಡಿಎಂಕೆ ನಾಯಕ ಉದಯನಿಧಿ ಮತ್ತೊಮ್ಮೆ ಸನಾತನ ಸಂಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಸನಾತನ ಧರ್ಮವನ್ನು ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಕ್ಕೆ ಹೋಲಿಸಿದ್ದರು. ಈ ಹೇಳಿಕೆ ಭಾರೀ ವಿವಾದ ಉಂಟು ಮಾಡಿದ ಮೇಲೆಯೂ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದಿದ್ದರು. ಇದರ ನಡುವೆ ಕನಿಮೊಳಿ ಕುಟುಂಬದವರು ರಾಮ ಮಂದಿರಕ್ಕೆ ಗಂಟೆ ಉಡುಗೊರೆಯಾಗಿ ನೀಡಿದ್ದು, ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago