ರಾಷ್ಟ್ರೀಯ

ಕನ್ನಿಮೋಳಿ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ಅರ್ಪಣೆ

ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಹಿಂದಿನಿಂದಲೂ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಲೆ ಬರುತ್ತಿದೆ. ಕರುಣಾನಿಧಿ ಅವರಿಂದ ಹಿಡಿದು, ಉದಯನಿಧಿ ಸ್ಟಾಲಿನ್‌ ವೆರೆಗೂ ಸನಾತನ ಧರ್ಮವನ್ನು ವಿರೋಧಿಸಿದ ಹಲವಾರು ಪ್ರಕರಣಗಳು ಕಣ್ಣಮುಂದಿದೆ. ಈ ಮಧ್ಯೆ ಸ್ಟಾಲಿನ್‌ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ನೀಡಲಾಗಿದ್ದು, ಅದರಲ್ಲಿ ಜೈ ಶ್ರೀರಾಮ್‌ ಎಂದು ಬರೆಯಲಾಗಿದೆ.

613 ಕೆ.ಜಿ ತೂಕದ ಗಂಟೆಯನ್ನು ತಮಿಳುನಾಡು ಸಂಸದೆ ಕನಿಮೋಳಿ ಅವರ ಕುಟುಂಬ ಸದಸ್ಯರು ಕಳುಹಿಸಿದ್ದಾರೆ ಎಂದು ಅದರಲ್ಲಿ ಬರೆಯಲಾಗಿದೆ. ಆ ಗಂಟೆಯನ್ನು ಬಾರಿಸಿದಾಗ ಓಂಕಾರ ಹೊರ ಹೊಮ್ಮುತ್ತದೆ. ಈ ಗಂಟೆಯಿಂದ ಹೊರಹೊಮ್ಮುವ ಓಂ ಶ್ರೀರಾಮನ ನೆಲೆಯಲ್ಲಿ ಅವರ ಆರಾಧ್ಯ ದೈವವಾದ ಮಹಾದೇವನ ಉಪಸ್ಥಿತಿಯನ್ನು ಕೂಡಾ ಪ್ರತಿಧ್ವನಿಸುತ್ತದೆ ಎಂದು ಹೇಳಲಾಗುತ್ತದೆ.

ಕನಿಮೊಳಿ ಯಾರು? : ಡಿಎಂಕೆ ಸಂಸದೆ ಕನಿಮೊಳಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಲಸಹೋದರಿ. ಕನಿಮೊಳಿ ಅವರ ಪತಿ ಸಿಂಗಾಪುರದ ಪ್ರಜೆ. ಕಳೆದ ವರ್ಷದವರೆಗೂ ಅವರ ಬಳಿ ಪಾನ್ ಕಾರ್ಡ್ ಇರಲಿಲ್ಲ ಎನ್ನುವುದು ಗಮನಿಸಬೇಕಾದ ಅಂಶ.

ಡಿಎಂಕೆ ನಾಯಕ ಉದಯನಿಧಿ ಮತ್ತೊಮ್ಮೆ ಸನಾತನ ಸಂಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಸನಾತನ ಧರ್ಮವನ್ನು ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಕ್ಕೆ ಹೋಲಿಸಿದ್ದರು. ಈ ಹೇಳಿಕೆ ಭಾರೀ ವಿವಾದ ಉಂಟು ಮಾಡಿದ ಮೇಲೆಯೂ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದಿದ್ದರು. ಇದರ ನಡುವೆ ಕನಿಮೊಳಿ ಕುಟುಂಬದವರು ರಾಮ ಮಂದಿರಕ್ಕೆ ಗಂಟೆ ಉಡುಗೊರೆಯಾಗಿ ನೀಡಿದ್ದು, ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

3 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

3 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

3 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

8 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

8 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

9 hours ago