ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಹಿಂದಿನಿಂದಲೂ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಲೆ ಬರುತ್ತಿದೆ. ಕರುಣಾನಿಧಿ ಅವರಿಂದ ಹಿಡಿದು, ಉದಯನಿಧಿ ಸ್ಟಾಲಿನ್ ವೆರೆಗೂ ಸನಾತನ ಧರ್ಮವನ್ನು ವಿರೋಧಿಸಿದ ಹಲವಾರು ಪ್ರಕರಣಗಳು ಕಣ್ಣಮುಂದಿದೆ. ಈ ಮಧ್ಯೆ ಸ್ಟಾಲಿನ್ ಕುಟುಂಬದಿಂದ ರಾಮ ಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ನೀಡಲಾಗಿದ್ದು, ಅದರಲ್ಲಿ ಜೈ ಶ್ರೀರಾಮ್ ಎಂದು ಬರೆಯಲಾಗಿದೆ.
613 ಕೆ.ಜಿ ತೂಕದ ಗಂಟೆಯನ್ನು ತಮಿಳುನಾಡು ಸಂಸದೆ ಕನಿಮೋಳಿ ಅವರ ಕುಟುಂಬ ಸದಸ್ಯರು ಕಳುಹಿಸಿದ್ದಾರೆ ಎಂದು ಅದರಲ್ಲಿ ಬರೆಯಲಾಗಿದೆ. ಆ ಗಂಟೆಯನ್ನು ಬಾರಿಸಿದಾಗ ಓಂಕಾರ ಹೊರ ಹೊಮ್ಮುತ್ತದೆ. ಈ ಗಂಟೆಯಿಂದ ಹೊರಹೊಮ್ಮುವ ಓಂ ಶ್ರೀರಾಮನ ನೆಲೆಯಲ್ಲಿ ಅವರ ಆರಾಧ್ಯ ದೈವವಾದ ಮಹಾದೇವನ ಉಪಸ್ಥಿತಿಯನ್ನು ಕೂಡಾ ಪ್ರತಿಧ್ವನಿಸುತ್ತದೆ ಎಂದು ಹೇಳಲಾಗುತ್ತದೆ.
ಕನಿಮೊಳಿ ಯಾರು? : ಡಿಎಂಕೆ ಸಂಸದೆ ಕನಿಮೊಳಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಲಸಹೋದರಿ. ಕನಿಮೊಳಿ ಅವರ ಪತಿ ಸಿಂಗಾಪುರದ ಪ್ರಜೆ. ಕಳೆದ ವರ್ಷದವರೆಗೂ ಅವರ ಬಳಿ ಪಾನ್ ಕಾರ್ಡ್ ಇರಲಿಲ್ಲ ಎನ್ನುವುದು ಗಮನಿಸಬೇಕಾದ ಅಂಶ.
ಡಿಎಂಕೆ ನಾಯಕ ಉದಯನಿಧಿ ಮತ್ತೊಮ್ಮೆ ಸನಾತನ ಸಂಸ್ಥೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಸನಾತನ ಧರ್ಮವನ್ನು ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಕ್ಕೆ ಹೋಲಿಸಿದ್ದರು. ಈ ಹೇಳಿಕೆ ಭಾರೀ ವಿವಾದ ಉಂಟು ಮಾಡಿದ ಮೇಲೆಯೂ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದಿದ್ದರು. ಇದರ ನಡುವೆ ಕನಿಮೊಳಿ ಕುಟುಂಬದವರು ರಾಮ ಮಂದಿರಕ್ಕೆ ಗಂಟೆ ಉಡುಗೊರೆಯಾಗಿ ನೀಡಿದ್ದು, ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದೆ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…