ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ.
ಬಾಬಾ ಫರೀದ್ಯೋಟ್ ಯುನಿವರ್ಸಿಟಿ ಆಫ್ ಹೆಲ್ತ್ ಸಾಯನ್ಸಸ್ ನಡೆಸಿದ ಪರೀಕ್ಷೆ ಕೋಟ್ಕಪುರದ ಡಿಎವಿ ಪಬ್ಲಿಕ್ ಸ್ಕೂಲಿನಲ್ಲಿ ಪಡೆದಿತ್ತು. ತನ್ನ ಪ್ರಿಯತಮೆ ಪರಂಜೀತ್ ಕೌರ್ಗೆ ಸಹಾಯ ಮಾಡಲೆಂದು ಆಕೆಯ ವೇಷ ಧರಿಸಿ ಫಝಿಲ್ಕಾ ಎಂಬಲ್ಲಿನ ಅಂಗ್ರೇಜ್ ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಮಹಿಳೆಯರು ಉಡುಪು, ಕೆಂಪು ಬಳೆ, ಬಿಂದಿ, ಲಿಪ್ಪಿಕ್ ಧರಿಸಿ ಬಂದಿದ್ದ. ತಾನು ಪರಂಜೀತ್ ಕೌರ್ ಎಂದು ತೋರಿಸಿಕೊಳ್ಳಲು ನಕಲಿ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಅನ್ನು ತಯಾರಿಸಿದ್ದ. ಇನ್ನೇನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಕ್ಕಿತೆಂಬಷ್ಟರಲ್ಲಿ ಬಯೋಮೆಟ್ರಿಕ್ ಸಾಧನದಲ್ಲಿ ಬೆರಳಚ್ಚು ಮ್ಯಾಚ್ ಆಗದೇ ಆತ ಸಿಕ್ಕಿ ಬಿದ್ದಿದ್ದಾನೆ.
ಘಟನೆಯ ನಂತರ ಪರಂಜೀತ್ ಕೌರ್ ಅರ್ಜಿಯನ್ನು ತಿರಸ್ಕರಿಸಲಾಯಿತು ಹಾಗೂ ಅಂಗ್ರೇಜ್ ಸಿಂಗ್ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಆಡಳಿತ ಮುಂದಾಗಿದೆ.
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…
ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು…