ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ.
ಬಾಬಾ ಫರೀದ್ಯೋಟ್ ಯುನಿವರ್ಸಿಟಿ ಆಫ್ ಹೆಲ್ತ್ ಸಾಯನ್ಸಸ್ ನಡೆಸಿದ ಪರೀಕ್ಷೆ ಕೋಟ್ಕಪುರದ ಡಿಎವಿ ಪಬ್ಲಿಕ್ ಸ್ಕೂಲಿನಲ್ಲಿ ಪಡೆದಿತ್ತು. ತನ್ನ ಪ್ರಿಯತಮೆ ಪರಂಜೀತ್ ಕೌರ್ಗೆ ಸಹಾಯ ಮಾಡಲೆಂದು ಆಕೆಯ ವೇಷ ಧರಿಸಿ ಫಝಿಲ್ಕಾ ಎಂಬಲ್ಲಿನ ಅಂಗ್ರೇಜ್ ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಮಹಿಳೆಯರು ಉಡುಪು, ಕೆಂಪು ಬಳೆ, ಬಿಂದಿ, ಲಿಪ್ಪಿಕ್ ಧರಿಸಿ ಬಂದಿದ್ದ. ತಾನು ಪರಂಜೀತ್ ಕೌರ್ ಎಂದು ತೋರಿಸಿಕೊಳ್ಳಲು ನಕಲಿ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಅನ್ನು ತಯಾರಿಸಿದ್ದ. ಇನ್ನೇನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಕ್ಕಿತೆಂಬಷ್ಟರಲ್ಲಿ ಬಯೋಮೆಟ್ರಿಕ್ ಸಾಧನದಲ್ಲಿ ಬೆರಳಚ್ಚು ಮ್ಯಾಚ್ ಆಗದೇ ಆತ ಸಿಕ್ಕಿ ಬಿದ್ದಿದ್ದಾನೆ.
ಘಟನೆಯ ನಂತರ ಪರಂಜೀತ್ ಕೌರ್ ಅರ್ಜಿಯನ್ನು ತಿರಸ್ಕರಿಸಲಾಯಿತು ಹಾಗೂ ಅಂಗ್ರೇಜ್ ಸಿಂಗ್ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಆಡಳಿತ ಮುಂದಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…