ರಾಷ್ಟ್ರೀಯ

ಪ್ರಿಯತಮೆಯ ವೇಷ ಧರಿಸಿ ಪರೀಕ್ಷೆ ಬರೆಯಲು ಬಂದು ಸಿಕ್ಕಿ ಬಿದ್ದ ಯುವಕ

ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ.

ಬಾಬಾ ಫರೀದ್ಯೋಟ್ ಯುನಿವರ್ಸಿಟಿ ಆಫ್ ಹೆಲ್ತ್ ಸಾಯನ್ಸಸ್ ನಡೆಸಿದ ಪರೀಕ್ಷೆ ಕೋಟ್ಕಪುರದ ಡಿಎವಿ ಪಬ್ಲಿಕ್ ಸ್ಕೂಲಿನಲ್ಲಿ ಪಡೆದಿತ್ತು. ತನ್ನ ಪ್ರಿಯತಮೆ ಪರಂಜೀತ್ ಕೌರ್‌ಗೆ ಸಹಾಯ ಮಾಡಲೆಂದು ಆಕೆಯ ವೇಷ ಧರಿಸಿ ಫಝಿಲ್ಕಾ ಎಂಬಲ್ಲಿನ ಅಂಗ್ರೇಜ್ ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಮಹಿಳೆಯರು ಉಡುಪು, ಕೆಂಪು ಬಳೆ, ಬಿಂದಿ, ಲಿಪ್ಪಿಕ್ ಧರಿಸಿ ಬಂದಿದ್ದ. ತಾನು ಪರಂಜೀತ್ ಕೌರ್ ಎಂದು ತೋರಿಸಿಕೊಳ್ಳಲು ನಕಲಿ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಅನ್ನು ತಯಾರಿಸಿದ್ದ. ಇನ್ನೇನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಕ್ಕಿತೆಂಬಷ್ಟರಲ್ಲಿ ಬಯೋಮೆಟ್ರಿಕ್ ಸಾಧನದಲ್ಲಿ ಬೆರಳಚ್ಚು ಮ್ಯಾಚ್‌ ಆಗದೇ ಆತ ಸಿಕ್ಕಿ ಬಿದ್ದಿದ್ದಾನೆ.

ಘಟನೆಯ ನಂತರ ಪರಂಜೀತ್ ಕೌರ್ ಅರ್ಜಿಯನ್ನು ತಿರಸ್ಕರಿಸಲಾಯಿತು ಹಾಗೂ ಅಂಗ್ರೇಜ್ ಸಿಂಗ್ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಆಡಳಿತ ಮುಂದಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago