ರಾಷ್ಟ್ರೀಯ

ಭಯೋತ್ಪಾದನೆ ನಿಗ್ರಹಕ್ಕೆ ಸೇನೆಯಿಂದ ಎಐ ತಂತ್ರಜ್ಞಾನ ಅಳವಡಿಕೆ

ನವದೆಹಲಿ : ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ.

ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ ದೇಶದ ಗಡಿಯೊಳಗೆ ನುಗ್ಗಲು ಭಯೋತ್ಪಾದಕರಿಗೆ ಉತ್ತೇಜಿಸುವ ಪಾಕಿಸ್ತಾನಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಲ್ಲದೇ ಪದೇ ಪದೇ ಗಡಿಯಲ್ಲಿ ಸಮಸ್ಯೆ ಹುಟ್ಟು ಹಾಕಿ ಕಾಲು ಕೆದರಿ ಜಗಳಕ್ಕೆ ನಿಲ್ಲುವ ಚೀನಾ ತಂಟೆಯನ್ನೂ ಬಂದ್ ಮಾಡಲು ರಕ್ಷಣಾ ಇಲಾಖೆ ಮುಂದಾಗಿದೆ.

ರಕ್ಷಣೆಗೆ ಬಳಸುವ ಎಐ ತಂತ್ರಜ್ಞಾನದಲ್ಲಿ ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾಗಳು, ಮಾನವರಹಿತ ವಿಮಾನಗಳು ಮತ್ತು ರೆಡಾರ್‍ಗಳನ್ನು ಒಳಗೊಂಡಿವೆ. ಇವುಗಳು ನೈಜ ಸಮಯದಲ್ಲಿ ಮಾನಿಟರಿಂಗ್ ಮಾಡುವ ಸಾಫ್ಟ್‍ವೇರ್‍ಗಳನ್ನು ಸಹ ಹೊಂದಿವೆ. ಈ ಮೂಲಕ ಗಡಿಯಲ್ಲಿ ಶತ್ರುಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ.

ಗಡಿಗಳಲ್ಲಿ ಗಸ್ತು ತಿರುಗಲು ಸಹ ಎಐ ಚಾಲಿತ ಡ್ರೋನ್‍ಗಳು ಮತ್ತು ರೋಬೋಟ್‍ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಮಾನವ ಹಸ್ತಕ್ಷೇಪ ಹಾಗೂ ಅಪಾಯಗಳ ಪ್ರಮಾಣವನ್ನು ತಗ್ಗಿಸಲಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 75 ಹೊಸದಾಗಿ ಅಭಿವೃದ್ಧಿಪಡಿಸಿದ ಎಐ ತಂತ್ರಜ್ಞಾನಗಳನ್ನು ಕಳೆದ ಜುಲೈನಲ್ಲಿ ಎಐ ಇನ್ ಡಿಫೆನ್ಸ್ ವಿಚಾರ ಸಂಕಿರಣದಲ್ಲಿ ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಲ್ಲಿ ರೋಬೋಟಿಕ್ಸ್, ಕಣ್ಗಾವಲು ಕ್ಯಾಮೆರಾಗಳನ್ನು ಪ್ರದರ್ಶಿಸಲಾಗಿತ್ತು.

ಈ ವರ್ಷದ ಆರಂಭದಲ್ಲಿ ನಡೆದ ಏಷ್ಯಾದ ಅತಿದೊಡ್ಡ ಏರ್ ಶೋಗಳಲ್ಲಿ ಒಂದಾದ ಏರೋ ಇಂಡಿಯಾದಲ್ಲಿ ಎಐ ಆಧಾರಿತ ಕಣ್ಗಾವಲು ಸಾಫ್ಟ್‍ವೇರ್ ರಕ್ಷಣಾ ಕ್ಷೇತ್ರದಲ್ಲಿ ಬಳಸುವ ವಿಧಾನವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಸೇನೆಗೆ ತರಬೇತಿ ಸಹ ನೀಡಲಾಗಿದೆ. ಹೆಚ್ಚಿನ ತರಬೇತಿಗಾಗಿ ಅಮೆರಿಕದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಸಾಫ್ಟ್‍ವೇರ್ ಆಧಾರಿತ ಕ್ಯಾಮೆರಾಗಳನ್ನು ಪೂರ್ವ ಲಡಾಖ್ ಸೆಕ್ಟರ್‍ನಲ್ಲಿರಿಸಲಾಗಿದೆ. ಇದು ಚೀನಾಕ್ಕೆ ನಿಕಟವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಅಪಾಯದ ಸ್ಥಳಗಳಾದ ಕಾಶ್ಮೀರದಿಂದ ಸಿಕ್ಕಿಂವರೆಗೆ ಭಾರತದ ಸೂಕ್ಷ್ಮ ಗಡಿಗಳಲ್ಲಿ ಎಐ ತಂತ್ರಜ್ಞಾನ ವರದಾನವಾಗಿದೆ. ಈ ಸಾಫ್ಟ್‍ವೇರ್ ಯಾವುದೇ ಚಲನೆ, ಶಸ್ತ್ರಾಸ್ತ್ರಗಳು, ವಾಹನಗಳು, ಟ್ಯಾಂಕರ್ಗಳು ಅಥವಾ ಕ್ಷಿಪಣಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಲೈವ್ ಮತ್ತು ರೆಕಾರ್ಡ್ ಮಾಡುತ್ತದೆ. ಅಲ್ಲದೇ ಅದರ ಸಂಪೂರ್ಣ ಮಾಹಿತಿಯನ್ನು ಸೇನೆಗೆ ರವಾನಿಸುತ್ತದೆ.

ಭಾರತೀಯ ಸೇನೆಯು ಪ್ರತಿ ವರ್ಷ ಎಐ ತಂತ್ರಜ್ಞಾನಕ್ಕಾಗಿ ಸರಿಸುಮಾರು 400 ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ. ಈ ವಿಚಾರದಲ್ಲಿ ಅಮೆರಿಕ ಹಾಗೂ ಚೀನಾ ಮುಂದಿದ್ದರೂ ಅವುಗಳಿಗೆ ಸರಿಯಾಗಿ ನಿಲ್ಲಲು ಭಾರತ ಸಮರ್ಥವಾಗಿದೆ.

ಇಸ್ರೇಲ್‍ನಲ್ಲಿ ಪ್ಯಾಲೆಸ್ತೇನಿಯನ್ ಮಿಲಿಟರಿಗೆ ಸಂಬಂಸಿದ ವ್ಯಕ್ತಿಗಳನ್ನು ಕಂಡು ಹಿಡಿಯಲು ಮತ್ತು ಅವರ ಮೇಲೆ ನಿಗಾ ಇಡಲು ಎಐ ಬಳಕೆ ಮಾಡಲಾಗುತ್ತಿದೆ. ಈ ತಂತ್ರಜ್ಞಾನವು ಸೇನಾ ಸಿಬ್ಬಂದಿಯ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮೊಬೈಲ್‍ಗಳನ್ನು ಅನ್‍ಲಾಕ್ ಮಾಡುವ ಮೂಲಕ ಅವರ ಮಾಹಿತಿ ಕಲೆಹಾಕುತ್ತದೆ. ಅವರ ಮೇಲೆ ಈ ಮೂಲಕ ನಿಗಾ ವಹಿಸುತ್ತದೆ.

 

andolanait

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

56 mins ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

60 mins ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

1 hour ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

1 hour ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

1 hour ago