ರಾಷ್ಟ್ರೀಯ

ಭಯೋತ್ಪಾದನೆ ನಿಗ್ರಹಕ್ಕೆ ಸೇನೆಯಿಂದ ಎಐ ತಂತ್ರಜ್ಞಾನ ಅಳವಡಿಕೆ

ನವದೆಹಲಿ : ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ.

ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ ದೇಶದ ಗಡಿಯೊಳಗೆ ನುಗ್ಗಲು ಭಯೋತ್ಪಾದಕರಿಗೆ ಉತ್ತೇಜಿಸುವ ಪಾಕಿಸ್ತಾನಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಲ್ಲದೇ ಪದೇ ಪದೇ ಗಡಿಯಲ್ಲಿ ಸಮಸ್ಯೆ ಹುಟ್ಟು ಹಾಕಿ ಕಾಲು ಕೆದರಿ ಜಗಳಕ್ಕೆ ನಿಲ್ಲುವ ಚೀನಾ ತಂಟೆಯನ್ನೂ ಬಂದ್ ಮಾಡಲು ರಕ್ಷಣಾ ಇಲಾಖೆ ಮುಂದಾಗಿದೆ.

ರಕ್ಷಣೆಗೆ ಬಳಸುವ ಎಐ ತಂತ್ರಜ್ಞಾನದಲ್ಲಿ ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾಗಳು, ಮಾನವರಹಿತ ವಿಮಾನಗಳು ಮತ್ತು ರೆಡಾರ್‍ಗಳನ್ನು ಒಳಗೊಂಡಿವೆ. ಇವುಗಳು ನೈಜ ಸಮಯದಲ್ಲಿ ಮಾನಿಟರಿಂಗ್ ಮಾಡುವ ಸಾಫ್ಟ್‍ವೇರ್‍ಗಳನ್ನು ಸಹ ಹೊಂದಿವೆ. ಈ ಮೂಲಕ ಗಡಿಯಲ್ಲಿ ಶತ್ರುಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ.

ಗಡಿಗಳಲ್ಲಿ ಗಸ್ತು ತಿರುಗಲು ಸಹ ಎಐ ಚಾಲಿತ ಡ್ರೋನ್‍ಗಳು ಮತ್ತು ರೋಬೋಟ್‍ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಮಾನವ ಹಸ್ತಕ್ಷೇಪ ಹಾಗೂ ಅಪಾಯಗಳ ಪ್ರಮಾಣವನ್ನು ತಗ್ಗಿಸಲಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 75 ಹೊಸದಾಗಿ ಅಭಿವೃದ್ಧಿಪಡಿಸಿದ ಎಐ ತಂತ್ರಜ್ಞಾನಗಳನ್ನು ಕಳೆದ ಜುಲೈನಲ್ಲಿ ಎಐ ಇನ್ ಡಿಫೆನ್ಸ್ ವಿಚಾರ ಸಂಕಿರಣದಲ್ಲಿ ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಲ್ಲಿ ರೋಬೋಟಿಕ್ಸ್, ಕಣ್ಗಾವಲು ಕ್ಯಾಮೆರಾಗಳನ್ನು ಪ್ರದರ್ಶಿಸಲಾಗಿತ್ತು.

ಈ ವರ್ಷದ ಆರಂಭದಲ್ಲಿ ನಡೆದ ಏಷ್ಯಾದ ಅತಿದೊಡ್ಡ ಏರ್ ಶೋಗಳಲ್ಲಿ ಒಂದಾದ ಏರೋ ಇಂಡಿಯಾದಲ್ಲಿ ಎಐ ಆಧಾರಿತ ಕಣ್ಗಾವಲು ಸಾಫ್ಟ್‍ವೇರ್ ರಕ್ಷಣಾ ಕ್ಷೇತ್ರದಲ್ಲಿ ಬಳಸುವ ವಿಧಾನವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಸೇನೆಗೆ ತರಬೇತಿ ಸಹ ನೀಡಲಾಗಿದೆ. ಹೆಚ್ಚಿನ ತರಬೇತಿಗಾಗಿ ಅಮೆರಿಕದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಸಾಫ್ಟ್‍ವೇರ್ ಆಧಾರಿತ ಕ್ಯಾಮೆರಾಗಳನ್ನು ಪೂರ್ವ ಲಡಾಖ್ ಸೆಕ್ಟರ್‍ನಲ್ಲಿರಿಸಲಾಗಿದೆ. ಇದು ಚೀನಾಕ್ಕೆ ನಿಕಟವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಅಪಾಯದ ಸ್ಥಳಗಳಾದ ಕಾಶ್ಮೀರದಿಂದ ಸಿಕ್ಕಿಂವರೆಗೆ ಭಾರತದ ಸೂಕ್ಷ್ಮ ಗಡಿಗಳಲ್ಲಿ ಎಐ ತಂತ್ರಜ್ಞಾನ ವರದಾನವಾಗಿದೆ. ಈ ಸಾಫ್ಟ್‍ವೇರ್ ಯಾವುದೇ ಚಲನೆ, ಶಸ್ತ್ರಾಸ್ತ್ರಗಳು, ವಾಹನಗಳು, ಟ್ಯಾಂಕರ್ಗಳು ಅಥವಾ ಕ್ಷಿಪಣಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಲೈವ್ ಮತ್ತು ರೆಕಾರ್ಡ್ ಮಾಡುತ್ತದೆ. ಅಲ್ಲದೇ ಅದರ ಸಂಪೂರ್ಣ ಮಾಹಿತಿಯನ್ನು ಸೇನೆಗೆ ರವಾನಿಸುತ್ತದೆ.

ಭಾರತೀಯ ಸೇನೆಯು ಪ್ರತಿ ವರ್ಷ ಎಐ ತಂತ್ರಜ್ಞಾನಕ್ಕಾಗಿ ಸರಿಸುಮಾರು 400 ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ. ಈ ವಿಚಾರದಲ್ಲಿ ಅಮೆರಿಕ ಹಾಗೂ ಚೀನಾ ಮುಂದಿದ್ದರೂ ಅವುಗಳಿಗೆ ಸರಿಯಾಗಿ ನಿಲ್ಲಲು ಭಾರತ ಸಮರ್ಥವಾಗಿದೆ.

ಇಸ್ರೇಲ್‍ನಲ್ಲಿ ಪ್ಯಾಲೆಸ್ತೇನಿಯನ್ ಮಿಲಿಟರಿಗೆ ಸಂಬಂಸಿದ ವ್ಯಕ್ತಿಗಳನ್ನು ಕಂಡು ಹಿಡಿಯಲು ಮತ್ತು ಅವರ ಮೇಲೆ ನಿಗಾ ಇಡಲು ಎಐ ಬಳಕೆ ಮಾಡಲಾಗುತ್ತಿದೆ. ಈ ತಂತ್ರಜ್ಞಾನವು ಸೇನಾ ಸಿಬ್ಬಂದಿಯ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮೊಬೈಲ್‍ಗಳನ್ನು ಅನ್‍ಲಾಕ್ ಮಾಡುವ ಮೂಲಕ ಅವರ ಮಾಹಿತಿ ಕಲೆಹಾಕುತ್ತದೆ. ಅವರ ಮೇಲೆ ಈ ಮೂಲಕ ನಿಗಾ ವಹಿಸುತ್ತದೆ.

 

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

4 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

4 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

6 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

6 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

6 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

7 hours ago