ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.
”ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ ಬ್ಯಾನರ್ಜಿಯೊಂದಿಗೆ ಮಾತನಾಡಿದ್ದಾರೆ. ಮುಂದುವರಿಯುವುದು ಹೇಗೆ ಎಂಬ ಬಗ್ಗೆ ನಾವು ನಿರ್ಧಾರವೊಂದಕ್ಕೆ ಬರುತ್ತೇವೆ” ಎಂದು ಕಾಂಗ್ರೆಸ್ ಪಕ್ಷದ ಸಂಪರ್ಕ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯನ್ನು ತನ್ನ ಪಕ್ಷವು ಏಕಾಂಗಿಯಾಗಿ ಎದುರಿಸುವುದು ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಘೋಷಿಸಿದ ಒಂದು ದಿನದ ಬಳಿಕ, ಬಿಕ್ಕಟ್ಟನ್ನು ತಿಳಿಗೊಳಿಸಲು ಖರ್ಗೆ ಗುರುವಾರ ಅವರೊಂದಿಗೆ ಮಾತನಾಡಿದ್ದಾರೆ ಎಂದು ಜೈರಾಮ್ ರಮೇಶ್ ತಿಳಿಸಿದರು.
ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯು ಬಿಹಾರದಲ್ಲಿ ಹಾದು ಹೋಗುವಾಗ ಜನವರಿ 30ರಂದು ಅದರಲ್ಲಿ ಭಾಗವಹಿಸುವಂತೆ ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಗೆ ಖರ್ಗೆ ಮನವಿಯನ್ನೂ ಮಾಡಿದ್ದಾರೆ ಎಂದು ಅವರು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…