ನವದೆಹಲಿ : ಮಳೆ ಪರಿಣಾಮ ದೆಹಲಿಯಲ್ಲಿ ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡಿದ್ದು, ನವೆಂಬರ್ 13 ರಿಂದ 20 ವರೆಗೆ ನಿಗಧಿಯಾಗಿದ್ದ ಸಮ-ಬೆಸ ಸಂಖ್ಯೆ ನಿಯಮವನ್ನು ಪರಿಸರ ಸಚಿವ ಗೋಪಾಲ್ ರೈ ಹಿಂಪಡೆದಿದ್ದಾರೆ.
ನವದೆಹಲಿಯಲ್ಲಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೀಪಾವಳಿ ನಂತರ ವಾಯುಗುಣಮಟ್ಟ ಪರಿಶೀಲಿಸಿದ ನಂತರ ವಾಹನಗಳ ಸಂಚಾರಕ್ಕೆ ಅಗತ್ಯಬಿದ್ದರೆ ಸಮ-ಬೆಸ ನಿಯಮವನ್ನು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ನಂತರ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಮಂಗಳವಾರ, ಸುಪ್ರೀಂ ಕೋರ್ಟ್ ವಾಹನ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ದೆಹಲಿ ಸರ್ಕಾರದ ಕಾರು-ಪಡಿತರ ಯೋಜನೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿತ್ತು.





