ರಾಷ್ಟ್ರೀಯ

ಪ್ರಶ್ನೆಗಳಿಗಾಗಿ ಲಂಚ ಆರೋಪ| ತನಿಖೆ ರಾಜಕೀಯ ಪ್ರತೀಕಾರ: ಮಹುವಾ ಮೊಯಿತ್ರಾ

ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ತನಿಖೆಗೆ ಸಹಕರಿಸಲು ತಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಅವರು ಸ್ತ್ರೀದ್ವೇಷದ ವಿರುದ್ಧ ರಕ್ಷಣೆ ಮತ್ತು ಸಭ್ಯತೆಯ ಮಟ್ಟವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನೀತಿ ಸಮಿತಿಯ ತನಿಖೆಯನ್ನು ರಾಜಕೀಯ ಪ್ರತೀಕಾರ ಎಂದು ಬಣ್ಣಿಸಿದ ಅವರು, ತನ್ನನ್ನು ಸಂಸತ್ತಿನಿಂದ ಅಮಾನತುಗೊಳಿಸುವುದು ತನಿಖೆಯ ಏಕೈಕ ಉದ್ದೇಶವಾಗಿದೆ ಎಂದು ಹೇಳಿದರು.

ಸಮಿತಿಯ ವಿಚಾರಣೆ ಸಂದರ್ಭದಲ್ಲಿ ತನ್ನ ವೈಯಕ್ತಿಕ ಜೀವನದ ಬಗ್ಗೆ ಅಪ್ರಸ್ತುತ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಆರೋಪಿಸಿದ ಮೊಯಿತ್ರಾ,‘ತನಿಖೆಗೆ ಸಹಕರಿಸಲು ಮತ್ತು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸದಾ ಸಿದ್ಧಳಿದ್ದೇನೆ. ಆದರೆ ಸಭ್ಯತೆಯ ಸೀಮಾರೇಖೆ ಇರಬೇಕು. ಅಗ್ಗದ ಮತ್ತು ಅವಹೇಳನಕಾರಿ ಪ್ರಶ್ನೆಗಳಿಂದ ನನಗೆ ರಕ್ಷಣೆಯ ಅಗತ್ಯವಿದೆ. ಈ ಬಗ್ಗೆ ನಾನು ಲೋಕಸಭಾ ಸ್ಪೀಕರ್‌ಗೂ ಬರೆದಿದ್ದೇನೆ’ ಎಂದರು.

‘ಕೊಳಕು, ಅಸಹ್ಯಕರ ಸ್ತ್ರೀದ್ವೇಷದ ವಿರುದ್ಧ ನನಗೆ ರಕ್ಷಣೆ ನೀಡಬೇಕು ಎಂದು ನಾನು ಲೋಕಸಭಾ ಸ್ಪೀಕರ್‌ಗೆ ತಿಳಿಸಿದ್ದೇನೆ. ವಿಚಾರಣೆಗೆ ಸಂಬಂಧಿಸಿದ ಪ್ರತಿಯೊಂದಕ್ಕೂ ನಾನೀಗಾಗಲೇ ಉತ್ತರಿಸಿದ್ದೇನೆ. ನನ್ನ ನಿಲುವನ್ನು ನೂರು ಸಲ ಸ್ಪಷ್ಟಪಡಿಸಿದ್ದೇನೆ. ನಾನು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದ್ದರೆ ಆ ಬಗ್ಗೆ ನನಗೆ ತಿಳಿಸಬೇಕು. ಅವರು ನನಗೆ ಯಾವುದೇ ಪ್ರಶ್ನೆಗಳನ್ನು ಕೇಳಬಯಸಿದರೂ ಪರವಾಗಿಲ್ಲ,ಆದರೆ ಈ ರೀತಿಯಲ್ಲಲ್ಲ’ ಎಂದು ಹೇಳಿದ ಮೊಯಿತ್ರಾ,ತನ್ನ ಲಾಗಿನ್ ಐಡಿ ಮತ್ತು ಉಡುಗೊರೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಾನೀಗಾಗಲೇ ಉತ್ತರಿಸಿದ್ದೇನೆ. ತಾನು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದರು.

ಉದ್ಯಮಿ ದರ್ಶನ ಹಿರಾನಂದನಿಯವರ ಸೂಚನೆಯ ಮೇರೆಗೆ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದ ಮತ್ತು ತನ್ನ ಲಾಗಿನ್ ವಿವರಗಳನ್ನು ಹಂಚಿಕೊಂಡಿದ್ದ ಆರೋಪಗಳನ್ನು ಮೊಯಿತ್ರಾ ಎದುರಿಸುತ್ತಿದ್ದಾರೆ. ಬಿಜೆಪಿ ಸಂಸದ ನಿಶಿಕಾಂತ ದುಬೆಯವರು ಮೊಯಿತ್ರಾ ವಿರುದ್ಧ ನೀತಿ ಸಮಿತಿಗೆ ದೂರು ಸಲ್ಲಿಸಿದ್ದಾರೆ.

andolanait

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

3 hours ago