ರಾಷ್ಟ್ರೀಯ

ಪ್ರಶ್ನೆಗಳಿಗಾಗಿ ಲಂಚ ಆರೋಪ| ತನಿಖೆ ರಾಜಕೀಯ ಪ್ರತೀಕಾರ: ಮಹುವಾ ಮೊಯಿತ್ರಾ

ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ತನಿಖೆಗೆ ಸಹಕರಿಸಲು ತಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಅವರು ಸ್ತ್ರೀದ್ವೇಷದ ವಿರುದ್ಧ ರಕ್ಷಣೆ ಮತ್ತು ಸಭ್ಯತೆಯ ಮಟ್ಟವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನೀತಿ ಸಮಿತಿಯ ತನಿಖೆಯನ್ನು ರಾಜಕೀಯ ಪ್ರತೀಕಾರ ಎಂದು ಬಣ್ಣಿಸಿದ ಅವರು, ತನ್ನನ್ನು ಸಂಸತ್ತಿನಿಂದ ಅಮಾನತುಗೊಳಿಸುವುದು ತನಿಖೆಯ ಏಕೈಕ ಉದ್ದೇಶವಾಗಿದೆ ಎಂದು ಹೇಳಿದರು.

ಸಮಿತಿಯ ವಿಚಾರಣೆ ಸಂದರ್ಭದಲ್ಲಿ ತನ್ನ ವೈಯಕ್ತಿಕ ಜೀವನದ ಬಗ್ಗೆ ಅಪ್ರಸ್ತುತ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಆರೋಪಿಸಿದ ಮೊಯಿತ್ರಾ,‘ತನಿಖೆಗೆ ಸಹಕರಿಸಲು ಮತ್ತು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸದಾ ಸಿದ್ಧಳಿದ್ದೇನೆ. ಆದರೆ ಸಭ್ಯತೆಯ ಸೀಮಾರೇಖೆ ಇರಬೇಕು. ಅಗ್ಗದ ಮತ್ತು ಅವಹೇಳನಕಾರಿ ಪ್ರಶ್ನೆಗಳಿಂದ ನನಗೆ ರಕ್ಷಣೆಯ ಅಗತ್ಯವಿದೆ. ಈ ಬಗ್ಗೆ ನಾನು ಲೋಕಸಭಾ ಸ್ಪೀಕರ್‌ಗೂ ಬರೆದಿದ್ದೇನೆ’ ಎಂದರು.

‘ಕೊಳಕು, ಅಸಹ್ಯಕರ ಸ್ತ್ರೀದ್ವೇಷದ ವಿರುದ್ಧ ನನಗೆ ರಕ್ಷಣೆ ನೀಡಬೇಕು ಎಂದು ನಾನು ಲೋಕಸಭಾ ಸ್ಪೀಕರ್‌ಗೆ ತಿಳಿಸಿದ್ದೇನೆ. ವಿಚಾರಣೆಗೆ ಸಂಬಂಧಿಸಿದ ಪ್ರತಿಯೊಂದಕ್ಕೂ ನಾನೀಗಾಗಲೇ ಉತ್ತರಿಸಿದ್ದೇನೆ. ನನ್ನ ನಿಲುವನ್ನು ನೂರು ಸಲ ಸ್ಪಷ್ಟಪಡಿಸಿದ್ದೇನೆ. ನಾನು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದ್ದರೆ ಆ ಬಗ್ಗೆ ನನಗೆ ತಿಳಿಸಬೇಕು. ಅವರು ನನಗೆ ಯಾವುದೇ ಪ್ರಶ್ನೆಗಳನ್ನು ಕೇಳಬಯಸಿದರೂ ಪರವಾಗಿಲ್ಲ,ಆದರೆ ಈ ರೀತಿಯಲ್ಲಲ್ಲ’ ಎಂದು ಹೇಳಿದ ಮೊಯಿತ್ರಾ,ತನ್ನ ಲಾಗಿನ್ ಐಡಿ ಮತ್ತು ಉಡುಗೊರೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಾನೀಗಾಗಲೇ ಉತ್ತರಿಸಿದ್ದೇನೆ. ತಾನು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದರು.

ಉದ್ಯಮಿ ದರ್ಶನ ಹಿರಾನಂದನಿಯವರ ಸೂಚನೆಯ ಮೇರೆಗೆ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದ ಮತ್ತು ತನ್ನ ಲಾಗಿನ್ ವಿವರಗಳನ್ನು ಹಂಚಿಕೊಂಡಿದ್ದ ಆರೋಪಗಳನ್ನು ಮೊಯಿತ್ರಾ ಎದುರಿಸುತ್ತಿದ್ದಾರೆ. ಬಿಜೆಪಿ ಸಂಸದ ನಿಶಿಕಾಂತ ದುಬೆಯವರು ಮೊಯಿತ್ರಾ ವಿರುದ್ಧ ನೀತಿ ಸಮಿತಿಗೆ ದೂರು ಸಲ್ಲಿಸಿದ್ದಾರೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

8 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago