ರಾಷ್ಟ್ರೀಯ

ಪ್ರಶ್ನೆಗಳಿಗಾಗಿ ಲಂಚ ಆರೋಪ| ತನಿಖೆ ರಾಜಕೀಯ ಪ್ರತೀಕಾರ: ಮಹುವಾ ಮೊಯಿತ್ರಾ

ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ತನಿಖೆಗೆ ಸಹಕರಿಸಲು ತಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಅವರು ಸ್ತ್ರೀದ್ವೇಷದ ವಿರುದ್ಧ ರಕ್ಷಣೆ ಮತ್ತು ಸಭ್ಯತೆಯ ಮಟ್ಟವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನೀತಿ ಸಮಿತಿಯ ತನಿಖೆಯನ್ನು ರಾಜಕೀಯ ಪ್ರತೀಕಾರ ಎಂದು ಬಣ್ಣಿಸಿದ ಅವರು, ತನ್ನನ್ನು ಸಂಸತ್ತಿನಿಂದ ಅಮಾನತುಗೊಳಿಸುವುದು ತನಿಖೆಯ ಏಕೈಕ ಉದ್ದೇಶವಾಗಿದೆ ಎಂದು ಹೇಳಿದರು.

ಸಮಿತಿಯ ವಿಚಾರಣೆ ಸಂದರ್ಭದಲ್ಲಿ ತನ್ನ ವೈಯಕ್ತಿಕ ಜೀವನದ ಬಗ್ಗೆ ಅಪ್ರಸ್ತುತ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಆರೋಪಿಸಿದ ಮೊಯಿತ್ರಾ,‘ತನಿಖೆಗೆ ಸಹಕರಿಸಲು ಮತ್ತು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸದಾ ಸಿದ್ಧಳಿದ್ದೇನೆ. ಆದರೆ ಸಭ್ಯತೆಯ ಸೀಮಾರೇಖೆ ಇರಬೇಕು. ಅಗ್ಗದ ಮತ್ತು ಅವಹೇಳನಕಾರಿ ಪ್ರಶ್ನೆಗಳಿಂದ ನನಗೆ ರಕ್ಷಣೆಯ ಅಗತ್ಯವಿದೆ. ಈ ಬಗ್ಗೆ ನಾನು ಲೋಕಸಭಾ ಸ್ಪೀಕರ್‌ಗೂ ಬರೆದಿದ್ದೇನೆ’ ಎಂದರು.

‘ಕೊಳಕು, ಅಸಹ್ಯಕರ ಸ್ತ್ರೀದ್ವೇಷದ ವಿರುದ್ಧ ನನಗೆ ರಕ್ಷಣೆ ನೀಡಬೇಕು ಎಂದು ನಾನು ಲೋಕಸಭಾ ಸ್ಪೀಕರ್‌ಗೆ ತಿಳಿಸಿದ್ದೇನೆ. ವಿಚಾರಣೆಗೆ ಸಂಬಂಧಿಸಿದ ಪ್ರತಿಯೊಂದಕ್ಕೂ ನಾನೀಗಾಗಲೇ ಉತ್ತರಿಸಿದ್ದೇನೆ. ನನ್ನ ನಿಲುವನ್ನು ನೂರು ಸಲ ಸ್ಪಷ್ಟಪಡಿಸಿದ್ದೇನೆ. ನಾನು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದ್ದರೆ ಆ ಬಗ್ಗೆ ನನಗೆ ತಿಳಿಸಬೇಕು. ಅವರು ನನಗೆ ಯಾವುದೇ ಪ್ರಶ್ನೆಗಳನ್ನು ಕೇಳಬಯಸಿದರೂ ಪರವಾಗಿಲ್ಲ,ಆದರೆ ಈ ರೀತಿಯಲ್ಲಲ್ಲ’ ಎಂದು ಹೇಳಿದ ಮೊಯಿತ್ರಾ,ತನ್ನ ಲಾಗಿನ್ ಐಡಿ ಮತ್ತು ಉಡುಗೊರೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಾನೀಗಾಗಲೇ ಉತ್ತರಿಸಿದ್ದೇನೆ. ತಾನು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದರು.

ಉದ್ಯಮಿ ದರ್ಶನ ಹಿರಾನಂದನಿಯವರ ಸೂಚನೆಯ ಮೇರೆಗೆ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದ ಮತ್ತು ತನ್ನ ಲಾಗಿನ್ ವಿವರಗಳನ್ನು ಹಂಚಿಕೊಂಡಿದ್ದ ಆರೋಪಗಳನ್ನು ಮೊಯಿತ್ರಾ ಎದುರಿಸುತ್ತಿದ್ದಾರೆ. ಬಿಜೆಪಿ ಸಂಸದ ನಿಶಿಕಾಂತ ದುಬೆಯವರು ಮೊಯಿತ್ರಾ ವಿರುದ್ಧ ನೀತಿ ಸಮಿತಿಗೆ ದೂರು ಸಲ್ಲಿಸಿದ್ದಾರೆ.

andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

3 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

3 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

3 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

7 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

8 hours ago