ರಾಷ್ಟ್ರೀಯ

ಪ್ರಶ್ನೆಗಳಿಗಾಗಿ ಲಂಚ ಆರೋಪ| ತನಿಖೆ ರಾಜಕೀಯ ಪ್ರತೀಕಾರ: ಮಹುವಾ ಮೊಯಿತ್ರಾ

ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ತನಿಖೆಗೆ ಸಹಕರಿಸಲು ತಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಅವರು ಸ್ತ್ರೀದ್ವೇಷದ ವಿರುದ್ಧ ರಕ್ಷಣೆ ಮತ್ತು ಸಭ್ಯತೆಯ ಮಟ್ಟವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನೀತಿ ಸಮಿತಿಯ ತನಿಖೆಯನ್ನು ರಾಜಕೀಯ ಪ್ರತೀಕಾರ ಎಂದು ಬಣ್ಣಿಸಿದ ಅವರು, ತನ್ನನ್ನು ಸಂಸತ್ತಿನಿಂದ ಅಮಾನತುಗೊಳಿಸುವುದು ತನಿಖೆಯ ಏಕೈಕ ಉದ್ದೇಶವಾಗಿದೆ ಎಂದು ಹೇಳಿದರು.

ಸಮಿತಿಯ ವಿಚಾರಣೆ ಸಂದರ್ಭದಲ್ಲಿ ತನ್ನ ವೈಯಕ್ತಿಕ ಜೀವನದ ಬಗ್ಗೆ ಅಪ್ರಸ್ತುತ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಆರೋಪಿಸಿದ ಮೊಯಿತ್ರಾ,‘ತನಿಖೆಗೆ ಸಹಕರಿಸಲು ಮತ್ತು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸದಾ ಸಿದ್ಧಳಿದ್ದೇನೆ. ಆದರೆ ಸಭ್ಯತೆಯ ಸೀಮಾರೇಖೆ ಇರಬೇಕು. ಅಗ್ಗದ ಮತ್ತು ಅವಹೇಳನಕಾರಿ ಪ್ರಶ್ನೆಗಳಿಂದ ನನಗೆ ರಕ್ಷಣೆಯ ಅಗತ್ಯವಿದೆ. ಈ ಬಗ್ಗೆ ನಾನು ಲೋಕಸಭಾ ಸ್ಪೀಕರ್‌ಗೂ ಬರೆದಿದ್ದೇನೆ’ ಎಂದರು.

‘ಕೊಳಕು, ಅಸಹ್ಯಕರ ಸ್ತ್ರೀದ್ವೇಷದ ವಿರುದ್ಧ ನನಗೆ ರಕ್ಷಣೆ ನೀಡಬೇಕು ಎಂದು ನಾನು ಲೋಕಸಭಾ ಸ್ಪೀಕರ್‌ಗೆ ತಿಳಿಸಿದ್ದೇನೆ. ವಿಚಾರಣೆಗೆ ಸಂಬಂಧಿಸಿದ ಪ್ರತಿಯೊಂದಕ್ಕೂ ನಾನೀಗಾಗಲೇ ಉತ್ತರಿಸಿದ್ದೇನೆ. ನನ್ನ ನಿಲುವನ್ನು ನೂರು ಸಲ ಸ್ಪಷ್ಟಪಡಿಸಿದ್ದೇನೆ. ನಾನು ಯಾವುದಾದರೂ ನಿಯಮವನ್ನು ಉಲ್ಲಂಘಿಸಿದ್ದರೆ ಆ ಬಗ್ಗೆ ನನಗೆ ತಿಳಿಸಬೇಕು. ಅವರು ನನಗೆ ಯಾವುದೇ ಪ್ರಶ್ನೆಗಳನ್ನು ಕೇಳಬಯಸಿದರೂ ಪರವಾಗಿಲ್ಲ,ಆದರೆ ಈ ರೀತಿಯಲ್ಲಲ್ಲ’ ಎಂದು ಹೇಳಿದ ಮೊಯಿತ್ರಾ,ತನ್ನ ಲಾಗಿನ್ ಐಡಿ ಮತ್ತು ಉಡುಗೊರೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಾನೀಗಾಗಲೇ ಉತ್ತರಿಸಿದ್ದೇನೆ. ತಾನು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದರು.

ಉದ್ಯಮಿ ದರ್ಶನ ಹಿರಾನಂದನಿಯವರ ಸೂಚನೆಯ ಮೇರೆಗೆ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದ ಮತ್ತು ತನ್ನ ಲಾಗಿನ್ ವಿವರಗಳನ್ನು ಹಂಚಿಕೊಂಡಿದ್ದ ಆರೋಪಗಳನ್ನು ಮೊಯಿತ್ರಾ ಎದುರಿಸುತ್ತಿದ್ದಾರೆ. ಬಿಜೆಪಿ ಸಂಸದ ನಿಶಿಕಾಂತ ದುಬೆಯವರು ಮೊಯಿತ್ರಾ ವಿರುದ್ಧ ನೀತಿ ಸಮಿತಿಗೆ ದೂರು ಸಲ್ಲಿಸಿದ್ದಾರೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

6 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

7 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

8 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

8 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

9 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

10 hours ago