ರಾಷ್ಟ್ರೀಯ

ಆಂಧ್ರಪ್ರದೇಶ: ದಲಿತ ವ್ಯಕ್ತಿಗೆ ಥಳಿಸಿ, ಮೂತ್ರ ವಿಸರ್ಜಿಸಿದ ದುಷ್ಕರ್ಮಿಗಳು

ಎನ್‍ಟಿಆರ್ : ದಲಿತ ಯುವಕನೊಬ್ಬನನ್ನು ಥಳಿಸಿರುವ ಆರು ದುಷ್ಕರ್ಮಿಗಳು, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆಯು ಆಂಧ್ರಪ್ರದೇಶದ ಎನ್‍ಟಿಆರ್ ಜಿಲ್ಲೆಯಲ್ಲಿ ನಡೆದಿದೆ ಎಂದು ndtv.com ವರದಿ ಮಾಡಿದೆ.

ಸಂತ್ರಸ್ತ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಎಲ್ಲ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಸ್ವೀಕರಿಸಿರುವ ಮಾಹಿತಿಯ ಪ್ರಕಾರ, ಆರು ಮಂದಿ ದುಷ್ಕರ್ಮಿಗಳು ಆ ಯುವಕನನ್ನು ನಾಲ್ಕು ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡು ಮನ ಬಂದಂತೆ ಥಳಿಸಿದ್ದಾರೆ. ಆ ಯುವಕನು ಬಾಯಾರಿಕೆಯಿಂದ ನೀರು ಕೋರಿದಾಗ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೆ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ ಪರಿಶಿಷ್ಟ ಜಾತಿ ಘಟಕವು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆಯನ್ನೂ ಮಾಡಿದೆ.

andolanait

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

2 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

2 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

3 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

3 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

3 hours ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

3 hours ago