ಎನ್ಟಿಆರ್ : ದಲಿತ ಯುವಕನೊಬ್ಬನನ್ನು ಥಳಿಸಿರುವ ಆರು ದುಷ್ಕರ್ಮಿಗಳು, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆಯು ಆಂಧ್ರಪ್ರದೇಶದ ಎನ್ಟಿಆರ್ ಜಿಲ್ಲೆಯಲ್ಲಿ ನಡೆದಿದೆ ಎಂದು ndtv.com ವರದಿ ಮಾಡಿದೆ.
ಸಂತ್ರಸ್ತ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಎಲ್ಲ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಸ್ವೀಕರಿಸಿರುವ ಮಾಹಿತಿಯ ಪ್ರಕಾರ, ಆರು ಮಂದಿ ದುಷ್ಕರ್ಮಿಗಳು ಆ ಯುವಕನನ್ನು ನಾಲ್ಕು ಗಂಟೆಗಳ ಕಾಲ ತಮ್ಮ ವಶದಲ್ಲಿರಿಸಿಕೊಂಡು ಮನ ಬಂದಂತೆ ಥಳಿಸಿದ್ದಾರೆ. ಆ ಯುವಕನು ಬಾಯಾರಿಕೆಯಿಂದ ನೀರು ಕೋರಿದಾಗ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೆ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ ಪರಿಶಿಷ್ಟ ಜಾತಿ ಘಟಕವು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆಯನ್ನೂ ಮಾಡಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…