ರಾಷ್ಟ್ರೀಯ

ಕೊರೊನಾ ಜತೆ ಹೆಚ್ಚಾಯಿತು ಹಳೆ ಸಾಂಕ್ರಾಮಿಕ ರೋಗಗಳ ಅಬ್ಬರ

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ ಜೆಎನ್‌ 1ನ ಒಂದು ಕೇಸ್‌ ಸಹ ಕೇರಳದಲ್ಲಿ ಪತ್ತೆಯಾಗಿದೆ. ದಿನವೊಂದಕ್ಕೆ ಕೇರಳದಲ್ಲಿ 300ಕ್ಕೂ ಹೆಚ್ಚು ಹೊಸ ಕೊವಿಡ್‌ ಕೇಸ್‌ಗಳು ವರದಿಯಾಗಲು ಆರಂಭಿಸಿದ್ದು, ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.

ಕೇರಳದಲ್ಲಿ ಈ ಕೊವಿಡ್‌ ಹಾಗೂ ಜೆಎನ್‌ 1 ಜತೆಗೆ ಈ ಹಿಂದೆ ಮಹಾಮಾರಿಯಾಗಿ ಕಾಡಿದ್ದ ನಿಫಾ ವೈರಸ್‌ ಸಹ ಮರುಜೀವ ಪಡೆದುಕೊಂಡಿದೆ ಇಂದಿಗೂ ಕೆಲ ಸಕ್ರಿಯ ಪ್ರಕರಣಗಳಿವೆ. ಹೀಗೆ ರಾಜ್ಯದಲ್ಲಿ ಒಟ್ಟು ಮೂರು ಮೂರು ವೈರಸ್‌ಗಳು ಕಂಟಕವಾಗಿ ಪರಿಣಮಿಸಿವೆ.

ಇದು ಕೇರಳದ ಕಥೆಯಾದರೆ ಕೇರಳದ ಜತೆ ಗಡಿಯನ್ನು ಹಂಚಿಕೊಂಡಿರುವ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ಈ ಕುರಿತು ಆತಂಕ ಮನೆ ಮಾಡಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಬೆಕ್ಕುಗಳ ರೋಗ ಹಾಗೂ ಕಾಲುಬಾಯಿ ರೋಗಗಳು ಈಗಾಗಲೇ ಜನರಿಗೆ ತಲೆನೋವಾಗಿದೆ. ಕರಾವಳಿ ಭಾಗದ ದನ ಕರುಗಳಲ್ಲಿ ಈಗಲೂ ಕಾಲುಬಾಯಿ ರೋಗಗಳು ಪತ್ತೆಯಾಗುತ್ತಿದ್ದು, ಇತ್ತೀಚಿನ ಕೆಲ ದಿನಗಳಿಂದ ಬೆಕ್ಕು ರೋಗವೂ ಹೆಚ್ಚಾಗಿದೆ. ಸಂಪಾಜೆ ಗ್ರಾಮದ ಸುತ್ತಮುತ್ತ ಬೆಕ್ಕಿನ ಜ್ವರಕ್ಕೆ ಹಲವಾರು ಬೆಕ್ಕುಗಳು ಬಲಿಯಾಗಿವೆ. ಒಟ್ಟಿನಲ್ಲಿ ಕೊರೊನಾ ಮಹಾಮಾರಿ ಜತೆಗೆ ಪ್ರಾಣಿಗಳ ಸಾಂಕ್ರಾಮಿಕ ರೋಗಗಳೂ ಸಹ ಉಲ್ಬಣಗೊಳ್ಳುತ್ತಿರುವ ಕಾರಣ ಜನರು ಈ ಕುರಿತು ತುಸು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

4 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago