ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್ನ ಮತ್ತೊಂದು ತಳಿ ಜೆಎನ್ 1ನ ಒಂದು ಕೇಸ್ ಸಹ ಕೇರಳದಲ್ಲಿ ಪತ್ತೆಯಾಗಿದೆ. ದಿನವೊಂದಕ್ಕೆ ಕೇರಳದಲ್ಲಿ 300ಕ್ಕೂ ಹೆಚ್ಚು ಹೊಸ ಕೊವಿಡ್ ಕೇಸ್ಗಳು ವರದಿಯಾಗಲು ಆರಂಭಿಸಿದ್ದು, ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.
ಕೇರಳದಲ್ಲಿ ಈ ಕೊವಿಡ್ ಹಾಗೂ ಜೆಎನ್ 1 ಜತೆಗೆ ಈ ಹಿಂದೆ ಮಹಾಮಾರಿಯಾಗಿ ಕಾಡಿದ್ದ ನಿಫಾ ವೈರಸ್ ಸಹ ಮರುಜೀವ ಪಡೆದುಕೊಂಡಿದೆ ಇಂದಿಗೂ ಕೆಲ ಸಕ್ರಿಯ ಪ್ರಕರಣಗಳಿವೆ. ಹೀಗೆ ರಾಜ್ಯದಲ್ಲಿ ಒಟ್ಟು ಮೂರು ಮೂರು ವೈರಸ್ಗಳು ಕಂಟಕವಾಗಿ ಪರಿಣಮಿಸಿವೆ.
ಇದು ಕೇರಳದ ಕಥೆಯಾದರೆ ಕೇರಳದ ಜತೆ ಗಡಿಯನ್ನು ಹಂಚಿಕೊಂಡಿರುವ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ಈ ಕುರಿತು ಆತಂಕ ಮನೆ ಮಾಡಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಬೆಕ್ಕುಗಳ ರೋಗ ಹಾಗೂ ಕಾಲುಬಾಯಿ ರೋಗಗಳು ಈಗಾಗಲೇ ಜನರಿಗೆ ತಲೆನೋವಾಗಿದೆ. ಕರಾವಳಿ ಭಾಗದ ದನ ಕರುಗಳಲ್ಲಿ ಈಗಲೂ ಕಾಲುಬಾಯಿ ರೋಗಗಳು ಪತ್ತೆಯಾಗುತ್ತಿದ್ದು, ಇತ್ತೀಚಿನ ಕೆಲ ದಿನಗಳಿಂದ ಬೆಕ್ಕು ರೋಗವೂ ಹೆಚ್ಚಾಗಿದೆ. ಸಂಪಾಜೆ ಗ್ರಾಮದ ಸುತ್ತಮುತ್ತ ಬೆಕ್ಕಿನ ಜ್ವರಕ್ಕೆ ಹಲವಾರು ಬೆಕ್ಕುಗಳು ಬಲಿಯಾಗಿವೆ. ಒಟ್ಟಿನಲ್ಲಿ ಕೊರೊನಾ ಮಹಾಮಾರಿ ಜತೆಗೆ ಪ್ರಾಣಿಗಳ ಸಾಂಕ್ರಾಮಿಕ ರೋಗಗಳೂ ಸಹ ಉಲ್ಬಣಗೊಳ್ಳುತ್ತಿರುವ ಕಾರಣ ಜನರು ಈ ಕುರಿತು ತುಸು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…