ರಾಷ್ಟ್ರೀಯ

ಕೊರೊನಾ ಜತೆ ಹೆಚ್ಚಾಯಿತು ಹಳೆ ಸಾಂಕ್ರಾಮಿಕ ರೋಗಗಳ ಅಬ್ಬರ

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ ಜೆಎನ್‌ 1ನ ಒಂದು ಕೇಸ್‌ ಸಹ ಕೇರಳದಲ್ಲಿ ಪತ್ತೆಯಾಗಿದೆ. ದಿನವೊಂದಕ್ಕೆ ಕೇರಳದಲ್ಲಿ 300ಕ್ಕೂ ಹೆಚ್ಚು ಹೊಸ ಕೊವಿಡ್‌ ಕೇಸ್‌ಗಳು ವರದಿಯಾಗಲು ಆರಂಭಿಸಿದ್ದು, ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.

ಕೇರಳದಲ್ಲಿ ಈ ಕೊವಿಡ್‌ ಹಾಗೂ ಜೆಎನ್‌ 1 ಜತೆಗೆ ಈ ಹಿಂದೆ ಮಹಾಮಾರಿಯಾಗಿ ಕಾಡಿದ್ದ ನಿಫಾ ವೈರಸ್‌ ಸಹ ಮರುಜೀವ ಪಡೆದುಕೊಂಡಿದೆ ಇಂದಿಗೂ ಕೆಲ ಸಕ್ರಿಯ ಪ್ರಕರಣಗಳಿವೆ. ಹೀಗೆ ರಾಜ್ಯದಲ್ಲಿ ಒಟ್ಟು ಮೂರು ಮೂರು ವೈರಸ್‌ಗಳು ಕಂಟಕವಾಗಿ ಪರಿಣಮಿಸಿವೆ.

ಇದು ಕೇರಳದ ಕಥೆಯಾದರೆ ಕೇರಳದ ಜತೆ ಗಡಿಯನ್ನು ಹಂಚಿಕೊಂಡಿರುವ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ಈ ಕುರಿತು ಆತಂಕ ಮನೆ ಮಾಡಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಬೆಕ್ಕುಗಳ ರೋಗ ಹಾಗೂ ಕಾಲುಬಾಯಿ ರೋಗಗಳು ಈಗಾಗಲೇ ಜನರಿಗೆ ತಲೆನೋವಾಗಿದೆ. ಕರಾವಳಿ ಭಾಗದ ದನ ಕರುಗಳಲ್ಲಿ ಈಗಲೂ ಕಾಲುಬಾಯಿ ರೋಗಗಳು ಪತ್ತೆಯಾಗುತ್ತಿದ್ದು, ಇತ್ತೀಚಿನ ಕೆಲ ದಿನಗಳಿಂದ ಬೆಕ್ಕು ರೋಗವೂ ಹೆಚ್ಚಾಗಿದೆ. ಸಂಪಾಜೆ ಗ್ರಾಮದ ಸುತ್ತಮುತ್ತ ಬೆಕ್ಕಿನ ಜ್ವರಕ್ಕೆ ಹಲವಾರು ಬೆಕ್ಕುಗಳು ಬಲಿಯಾಗಿವೆ. ಒಟ್ಟಿನಲ್ಲಿ ಕೊರೊನಾ ಮಹಾಮಾರಿ ಜತೆಗೆ ಪ್ರಾಣಿಗಳ ಸಾಂಕ್ರಾಮಿಕ ರೋಗಗಳೂ ಸಹ ಉಲ್ಬಣಗೊಳ್ಳುತ್ತಿರುವ ಕಾರಣ ಜನರು ಈ ಕುರಿತು ತುಸು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago