ರಾಷ್ಟ್ರೀಯ

ಕೊರೊನಾ ಜತೆ ಹೆಚ್ಚಾಯಿತು ಹಳೆ ಸಾಂಕ್ರಾಮಿಕ ರೋಗಗಳ ಅಬ್ಬರ

ಕಳೆದ ಎರಡು ಮೂರು ದಿನಗಳಿಂದ ಕೇರಳ ರಾಜ್ಯದಲ್ಲಿ ಕೊವಿಡ್‌ ಮತ್ತೆ ಉಲ್ಬಣಗೊಳ್ಳುತ್ತಿರುವ ಸುದ್ದಿ ಕೇರಳ ಮಾತ್ರವಲ್ಲದೇ ಇಡೀ ದೇಶ ಜನತೆಯಲ್ಲಿ ಚಿಂತೆಯನ್ನುಂಟುಮಾಡಿದೆ. ಕೇರಳದಲ್ಲಿ ಈಗಾಗಲೇ ಸಕ್ರಿಯ ಕೊವಿಡ್‌ ಸೋಂಕಿತರ ಸಂಖ್ಯೆ 1000 ಗಡಿ ದಾಟಿದ್ದು, ಇದರ ಜತೆಗೆ ಕೊವಿಡ್‌ನ ಮತ್ತೊಂದು ತಳಿ ಜೆಎನ್‌ 1ನ ಒಂದು ಕೇಸ್‌ ಸಹ ಕೇರಳದಲ್ಲಿ ಪತ್ತೆಯಾಗಿದೆ. ದಿನವೊಂದಕ್ಕೆ ಕೇರಳದಲ್ಲಿ 300ಕ್ಕೂ ಹೆಚ್ಚು ಹೊಸ ಕೊವಿಡ್‌ ಕೇಸ್‌ಗಳು ವರದಿಯಾಗಲು ಆರಂಭಿಸಿದ್ದು, ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.

ಕೇರಳದಲ್ಲಿ ಈ ಕೊವಿಡ್‌ ಹಾಗೂ ಜೆಎನ್‌ 1 ಜತೆಗೆ ಈ ಹಿಂದೆ ಮಹಾಮಾರಿಯಾಗಿ ಕಾಡಿದ್ದ ನಿಫಾ ವೈರಸ್‌ ಸಹ ಮರುಜೀವ ಪಡೆದುಕೊಂಡಿದೆ ಇಂದಿಗೂ ಕೆಲ ಸಕ್ರಿಯ ಪ್ರಕರಣಗಳಿವೆ. ಹೀಗೆ ರಾಜ್ಯದಲ್ಲಿ ಒಟ್ಟು ಮೂರು ಮೂರು ವೈರಸ್‌ಗಳು ಕಂಟಕವಾಗಿ ಪರಿಣಮಿಸಿವೆ.

ಇದು ಕೇರಳದ ಕಥೆಯಾದರೆ ಕೇರಳದ ಜತೆ ಗಡಿಯನ್ನು ಹಂಚಿಕೊಂಡಿರುವ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ಈ ಕುರಿತು ಆತಂಕ ಮನೆ ಮಾಡಿದೆ. ಅಲ್ಲದೇ ಈ ಜಿಲ್ಲೆಗಳಲ್ಲಿ ಬೆಕ್ಕುಗಳ ರೋಗ ಹಾಗೂ ಕಾಲುಬಾಯಿ ರೋಗಗಳು ಈಗಾಗಲೇ ಜನರಿಗೆ ತಲೆನೋವಾಗಿದೆ. ಕರಾವಳಿ ಭಾಗದ ದನ ಕರುಗಳಲ್ಲಿ ಈಗಲೂ ಕಾಲುಬಾಯಿ ರೋಗಗಳು ಪತ್ತೆಯಾಗುತ್ತಿದ್ದು, ಇತ್ತೀಚಿನ ಕೆಲ ದಿನಗಳಿಂದ ಬೆಕ್ಕು ರೋಗವೂ ಹೆಚ್ಚಾಗಿದೆ. ಸಂಪಾಜೆ ಗ್ರಾಮದ ಸುತ್ತಮುತ್ತ ಬೆಕ್ಕಿನ ಜ್ವರಕ್ಕೆ ಹಲವಾರು ಬೆಕ್ಕುಗಳು ಬಲಿಯಾಗಿವೆ. ಒಟ್ಟಿನಲ್ಲಿ ಕೊರೊನಾ ಮಹಾಮಾರಿ ಜತೆಗೆ ಪ್ರಾಣಿಗಳ ಸಾಂಕ್ರಾಮಿಕ ರೋಗಗಳೂ ಸಹ ಉಲ್ಬಣಗೊಳ್ಳುತ್ತಿರುವ ಕಾರಣ ಜನರು ಈ ಕುರಿತು ತುಸು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

15 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

16 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

17 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

18 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

23 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

23 hours ago