ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು.
ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 16ರಂದು ನಡೆಯಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಕುರಿತು ಹಲವು ಮಾಧ್ಯಮಗಳು ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಆಯೋಗ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಬರೆದುಕೊಂಡಿದೆ. ಈ ಮೂಲಕ ಸುತ್ತೋಲೆಯಲ್ಲಿದ್ದ ದಿನಾಂಕ ಅಂತಿಮವಲ್ಲ ಎಂಬ ಸ್ಪಷ್ಟನೆಯನ್ನು ಚುನಾವಣಾ ಆಯೋಗ ನೀಡಿದೆ.
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…