ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ದೇಶವ್ಯಾಪಿ ಹೆಸರನ್ನು ಮಾಡಿದ್ದರು.
ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ ಬೆನ್ನಲ್ಲೆ ಇದೀಗ ಅರುಣ್ ಯೋಗಿರಾಜ್ ಮತ್ತೊಂದು ಮಹಾ ವಿಗ್ರಹದ ನಿರ್ಮಾಣಕ್ಕೆ ಕೈಹಾಕಲು ಮುಂದಾಗಿದ್ದಾರೆ.
ಹೌದು, ಹರಿಯಾಣದ ಕುರುಕ್ಷೇತ್ರದ ಬ್ರಹ್ಮ ಸರೋವರದ ಪೂರ್ವ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ 18 ಅಂತಸ್ತಿನ ಜ್ಞಾನ ಮಂದಿರದ ಗರ್ಭ ಗುಡಿಯಲ್ಲಿ ಸ್ಥಾಪಿಸಲು ಕೃಷ್ಣನ ವಿಗ್ರಹವನ್ನು ಕೆತ್ತಲು ಅರುಣ್ ಯೋಗಿರಾಜ್ ಅವರ ಜತೆ ಮಾತುಕತೆ ನಡೆಸಲಾಗಿದೆ ಎಂದು ಬ್ರಹ್ಮಪುರಿ ಅನ್ನಕ್ಷೇತ್ರ ಟ್ರಸ್ಟ್ ಜ್ಞಾನ ಮಂದಿರ ಸಂಸ್ಥಾಪಕ ಸ್ವಾಮಿ ಚಿರಂಜೀವಪುರಿ ಮಹಾರಾಜ್ ತಿಳಿಸಿದ್ದಾರೆ.
3 ಎಕರೆ ಜಾಗದಲ್ಲಿ 18 ಅಂತಸ್ತಿನ ಜ್ಞಾನ ಮಂದಿರ ನಿರ್ಮಾಣವಾಗುತ್ತಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಅರ್ಜುನನಿಗೆ ಸಂದೇಶ ನೀಡುತ್ತಿರುವ ಶ್ರೀಕೃಷ್ಣನ ದೈತ್ಯ ರೂಪವನ್ನು ಪ್ರತಿಷ್ಠಾಪಿಸಲಾಗುವುದು. ಇದಕ್ಕಾಗಿ ಅರುಣ್ ಯೋಗಿರಾಜ್ ಅವರ ಜತೆ ಚರ್ಚೆ ನಡೆಸಲಾಗಿದೆ. ಟ್ರಸ್ಟ್ ಸಹ ಯೋಜನೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಅರುಣ್ ಯೋಗಿರಾಜ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸ್ವಾಮಿ ಚಿರಂಜೀವಪುರಿ ಮಹಾರಾಜ್ ಹೇಳಿಕೆ ನೀಡಿದ್ದಾರೆ.
ಅಲ್ಲದೇ ಟ್ರಸ್ಟ್ನ ಮುಖ್ಯಸ್ಥ ರಾಜೇಶ್ ಗೋಯಲ್ ಸಹ ಈ ಕುರಿತು ಮಾತನಾಡಿದ್ದು, ಅರುಣ್ ಯೋಗಿರಾಜ್ ಅವರ ಜತೆ ಚರ್ಚಿಸಿದ ಬಳಿಕ ನೇಪಾಳದ ಗಂಡಕಿ ನದಿಯಲ್ಲಿ ವಿಶೇಷ ಸಾಲಿಗ್ರಾಮ ಶಿಲೆಯನ್ನು ತರಲು ನಿರಂತರವಾಗಿ ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…