ರಾಷ್ಟ್ರೀಯ

ಕುರುಕ್ಷೇತ್ರದಲ್ಲಿ ಕೃಷ್ಣನ ಮೂರ್ತಿ ಕೆತ್ತಲಿದ್ದಾರೆ ಬಾಲರಾಮ ಮೂರ್ತಿ ಖ್ಯಾತಿಯ ಅರುಣ್‌ ಯೋಗಿರಾಜ್‌

ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ದೇಶವ್ಯಾಪಿ ಹೆಸರನ್ನು ಮಾಡಿದ್ದರು.

ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್‌ ಯೋಗಿರಾಜ್‌ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ ಬೆನ್ನಲ್ಲೆ ಇದೀಗ ಅರುಣ್‌ ಯೋಗಿರಾಜ್‌ ಮತ್ತೊಂದು ಮಹಾ ವಿಗ್ರಹದ ನಿರ್ಮಾಣಕ್ಕೆ ಕೈಹಾಕಲು ಮುಂದಾಗಿದ್ದಾರೆ.

ಹೌದು, ಹರಿಯಾಣದ ಕುರುಕ್ಷೇತ್ರದ ಬ್ರಹ್ಮ ಸರೋವರದ ಪೂರ್ವ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ 18 ಅಂತಸ್ತಿನ ಜ್ಞಾನ ಮಂದಿರದ ಗರ್ಭ ಗುಡಿಯಲ್ಲಿ ಸ್ಥಾಪಿಸಲು ಕೃಷ್ಣನ ವಿಗ್ರಹವನ್ನು ಕೆತ್ತಲು ಅರುಣ್‌ ಯೋಗಿರಾಜ್‌ ಅವರ ಜತೆ ಮಾತುಕತೆ ನಡೆಸಲಾಗಿದೆ ಎಂದು ಬ್ರಹ್ಮಪುರಿ ಅನ್ನಕ್ಷೇತ್ರ ಟ್ರಸ್ಟ್‌ ಜ್ಞಾನ ಮಂದಿರ ಸಂಸ್ಥಾಪಕ ಸ್ವಾಮಿ ಚಿರಂಜೀವಪುರಿ ಮಹಾರಾಜ್‌ ತಿಳಿಸಿದ್ದಾರೆ.

3 ಎಕರೆ ಜಾಗದಲ್ಲಿ 18 ಅಂತಸ್ತಿನ ಜ್ಞಾನ ಮಂದಿರ ನಿರ್ಮಾಣವಾಗುತ್ತಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಅರ್ಜುನನಿಗೆ ಸಂದೇಶ ನೀಡುತ್ತಿರುವ ಶ್ರೀಕೃಷ್ಣನ ದೈತ್ಯ ರೂಪವನ್ನು ಪ್ರತಿಷ್ಠಾಪಿಸಲಾಗುವುದು. ಇದಕ್ಕಾಗಿ ಅರುಣ್‌ ಯೋಗಿರಾಜ್‌ ಅವರ ಜತೆ ಚರ್ಚೆ ನಡೆಸಲಾಗಿದೆ. ಟ್ರಸ್ಟ್‌ ಸಹ ಯೋಜನೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಅರುಣ್‌ ಯೋಗಿರಾಜ್‌ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸ್ವಾಮಿ ಚಿರಂಜೀವಪುರಿ ಮಹಾರಾಜ್‌ ಹೇಳಿಕೆ ನೀಡಿದ್ದಾರೆ.

ಅಲ್ಲದೇ ಟ್ರಸ್ಟ್‌ನ ಮುಖ್ಯಸ್ಥ ರಾಜೇಶ್‌ ಗೋಯಲ್‌ ಸಹ ಈ ಕುರಿತು ಮಾತನಾಡಿದ್ದು, ಅರುಣ್‌ ಯೋಗಿರಾಜ್‌ ಅವರ ಜತೆ ಚರ್ಚಿಸಿದ ಬಳಿಕ ನೇಪಾಳದ ಗಂಡಕಿ ನದಿಯಲ್ಲಿ ವಿಶೇಷ ಸಾಲಿಗ್ರಾಮ ಶಿಲೆಯನ್ನು ತರಲು ನಿರಂತರವಾಗಿ ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

12 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

14 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

14 hours ago