ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ದೇಶವ್ಯಾಪಿ ಹೆಸರನ್ನು ಮಾಡಿದ್ದರು.
ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ ಬೆನ್ನಲ್ಲೆ ಇದೀಗ ಅರುಣ್ ಯೋಗಿರಾಜ್ ಮತ್ತೊಂದು ಮಹಾ ವಿಗ್ರಹದ ನಿರ್ಮಾಣಕ್ಕೆ ಕೈಹಾಕಲು ಮುಂದಾಗಿದ್ದಾರೆ.
ಹೌದು, ಹರಿಯಾಣದ ಕುರುಕ್ಷೇತ್ರದ ಬ್ರಹ್ಮ ಸರೋವರದ ಪೂರ್ವ ದಂಡೆಯಲ್ಲಿ ನಿರ್ಮಾಣವಾಗುತ್ತಿರುವ 18 ಅಂತಸ್ತಿನ ಜ್ಞಾನ ಮಂದಿರದ ಗರ್ಭ ಗುಡಿಯಲ್ಲಿ ಸ್ಥಾಪಿಸಲು ಕೃಷ್ಣನ ವಿಗ್ರಹವನ್ನು ಕೆತ್ತಲು ಅರುಣ್ ಯೋಗಿರಾಜ್ ಅವರ ಜತೆ ಮಾತುಕತೆ ನಡೆಸಲಾಗಿದೆ ಎಂದು ಬ್ರಹ್ಮಪುರಿ ಅನ್ನಕ್ಷೇತ್ರ ಟ್ರಸ್ಟ್ ಜ್ಞಾನ ಮಂದಿರ ಸಂಸ್ಥಾಪಕ ಸ್ವಾಮಿ ಚಿರಂಜೀವಪುರಿ ಮಹಾರಾಜ್ ತಿಳಿಸಿದ್ದಾರೆ.
3 ಎಕರೆ ಜಾಗದಲ್ಲಿ 18 ಅಂತಸ್ತಿನ ಜ್ಞಾನ ಮಂದಿರ ನಿರ್ಮಾಣವಾಗುತ್ತಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಅರ್ಜುನನಿಗೆ ಸಂದೇಶ ನೀಡುತ್ತಿರುವ ಶ್ರೀಕೃಷ್ಣನ ದೈತ್ಯ ರೂಪವನ್ನು ಪ್ರತಿಷ್ಠಾಪಿಸಲಾಗುವುದು. ಇದಕ್ಕಾಗಿ ಅರುಣ್ ಯೋಗಿರಾಜ್ ಅವರ ಜತೆ ಚರ್ಚೆ ನಡೆಸಲಾಗಿದೆ. ಟ್ರಸ್ಟ್ ಸಹ ಯೋಜನೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಅರುಣ್ ಯೋಗಿರಾಜ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸ್ವಾಮಿ ಚಿರಂಜೀವಪುರಿ ಮಹಾರಾಜ್ ಹೇಳಿಕೆ ನೀಡಿದ್ದಾರೆ.
ಅಲ್ಲದೇ ಟ್ರಸ್ಟ್ನ ಮುಖ್ಯಸ್ಥ ರಾಜೇಶ್ ಗೋಯಲ್ ಸಹ ಈ ಕುರಿತು ಮಾತನಾಡಿದ್ದು, ಅರುಣ್ ಯೋಗಿರಾಜ್ ಅವರ ಜತೆ ಚರ್ಚಿಸಿದ ಬಳಿಕ ನೇಪಾಳದ ಗಂಡಕಿ ನದಿಯಲ್ಲಿ ವಿಶೇಷ ಸಾಲಿಗ್ರಾಮ ಶಿಲೆಯನ್ನು ತರಲು ನಿರಂತರವಾಗಿ ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…