ರಾಷ್ಟ್ರೀಯ

ಸದನದಲ್ಲಿ ಜೈ ಭೀಮ್‌, ಜೈ ಪ್ಯಾಲೆಸ್ತೇನ್‌ ಘೋಷಣೆ ಕೂಗಿದ ಅಸಾದುದ್ದೀನ್‌ ಓವೈಸಿ

ನವದೆಹಲಿ: ಲೋಕಸಭೆಯ ಈ ವರ್ಷದ ಮೊದಲ ಅಧಿವೇಶನದಲ್ಲಿ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದೆ. ಈ ವರ್ಷದ ಮೊದಲ ಅಧಿವೇಶನ ನಿನ್ನೆಯಿಂದ ಆರಂಭವಾಗಿದ್ದು, ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭೆ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಸಂಸದರಾಗಿದ್ದು, ಈ ನಡುವೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಪ್ರಮಾಣವಚನ ಸ್ವೀಕರಿಸಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಅಸಾದುದ್ದೀನ್‌ ಓವೈಸಿ ಅವರು ಪ್ರಮಾಣ ವಚನ ಸ್ವೀಕಾರದ ನಂತರದಲ್ಲಿ ಜೈ ಭೀಮ್‌, ಜೈ ತೆಲಂಗಾಣ, ಜೈ ಪ್ಯಾಲೆಸ್ತೇನ್‌ ಘೋಷಣೆಗಳನ್ನು ಕೂಗಿದ್ದು, ಇದಕ್ಕೆ ಹಲವು ಸಂಸದರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಹಂಗಾಮಿ ಸ್ಪೀಕರ್‌ ಭತೃಹರಿ ಮಹತಾಬ್‌ ಅವರು, ಓವೈಸಿ ಆಕ್ಷೇಪಾರ್ಹವಾಗಿ ಏನಾದರೂ ಹೇಳಿದ್ದರೆ ಅದನ್ನು ಕಲಾಪದ ದಾಖಲೆಯಿಂದ ತೆಗೆದು ಹಾಕಲಾಗುವುದು ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ

ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ…

1 hour ago

IPL 2025: 159ಕ್ಕೆ ರಾಜಸ್ಥಾನ್‌ ಆಲೌಟ್: ಗುಜರಾತ್‌ಗೆ 58 ರನ್‌ಗಳ ಭರ್ಜರಿ ಗೆಲುವು

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ…

2 hours ago

ಯಡಿಯೂರಪ್ಪ ಸರ್ಕಾರವಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ಬಿ.ವೈ.ವಿಜಯೇಂದ್ರ

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…

4 hours ago

ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ‌ ಎಂ‌ಡಿ ಆಗಿ ಮಂಗಲ್‌ ದಾಸ್‌ ನೇಮಕ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್‌ ದಾಸ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

4 hours ago

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು…

5 hours ago

ಇದು ‘ಪ್ರೀತಿಯ ಹುಚ್ಚ’ನ ಕಥೆ: ನೈಜ ಘಟನೆ ಆಧರಿಸಿದ ಚಿತ್ರ ಏಪ್ರಿಲ್.18ಕ್ಕೆ ತೆರೆಗೆ

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…

5 hours ago