ಗುವಾಹಟಿ : ಅಸ್ಸಾಂ ಸರ್ಕಾರಿ ನೌಕರರು ಸಂಗಾತಿ ಜೀವಂತವಾಗಿದ್ದು, ಇನ್ನೊಬ್ಬರನ್ನು ಮದುವೆಯಾಗುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಅವರು ದ್ವಿಪತ್ನಿತ್ವದಲ್ಲಿ ತೊಡಗಿಸಿಕೊಂಡರೆ ದಂಡದ ಕ್ರಮದ ಎಚ್ಚರಿಕೆಯನ್ನು ನೀಡಿದೆ.
ವಿಚ್ಛೇದನದ ಮಾನದಂಡದ ಬಗ್ಗೆ ಉಲ್ಲೇಖಿಸದ ಸಿಬ್ಬಂದಿ ಇಲಾಖೆಯ ಕಚೇರಿ ಮೆಮೊರಾಂಡಮ್, ಸಂಗಾತಿಯು ಜೀವಂತವಾಗಿದ್ದರೆ ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ.
ಅಕ್ಟೋಬರ್ 20 ರಂದು ಸಿಬ್ಬಂದಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀರಜ್ ವರ್ಮಾ ಅವರು ಅಧಿಸೂಚನೆ ಹೊರಡಿಸಿದ್ದರು, ಆದರೆ ಅದು ಗುರುವಾರ ಬೆಳಕಿಗೆ ಬಂದಿದೆ.
ಸಿಬ್ಬಂದಿ ಇಲಾಖೆಯ ಕಚೇರಿ ಸುತ್ತೋಲೆಯಲ್ಲಿ ಸಂಗಾತಿ ಬದುಕಿದ್ದು, ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ. ಆದರೆ, ಇದರಲ್ಲಿ ವಿಚ್ಛೇದನ ಮಾನದಂಡದ ಬಗ್ಗೆ ಉಲ್ಲೇಖಿಸಿಲ್ಲ.
ಹೆಂಡತಿ ಜೀವಂತವಾಗಿರುವ ಯಾವುದೇ ಸರ್ಕಾರಿ ನೌಕರನು ಸರ್ಕಾರದ ಅನುಮತಿಯನ್ನು ಪಡೆಯದೆ ಮತ್ತೊಂದು ಮದುವೆ ಒಪ್ಪಂದ ಮಾಡಿಕೊಳ್ಳಬಾರದು, ಅಂತೆಯೇ, ಯಾವುದೇ ಮಹಿಳಾ ಸರ್ಕಾರಿ ಉದ್ಯೋಗಿ, ತನ್ನ ಗಂಡ ಬದುಕಿರುವಾಗ ಸರ್ಕಾರದ ಅನುಮತಿ ಪಡೆಯದೆ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದ್ದು,ಇದು ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
ಸಿಬ್ಬಂದಿ ಇಲಾಖೆಯ ಕಚೇರಿ ಸುತ್ತೋಲೆಯಲ್ಲಿ ಸಂಗಾತಿ ಬದುಕಿದ್ದು, ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ. ಆದರೆ,ಇದರಲ್ಲಿ ವಿಚ್ಛೇದನ ಮಾನದಂಡದ ಬಗ್ಗೆ ಉಲ್ಲೇಖಿಸಿಲ್ಲ.
ಹೆಂಡತಿ ಜೀವಂತವಾಗಿರುವ ಯಾವುದೇ ಸರ್ಕಾರಿ ನೌಕರನು ಸರ್ಕಾರದ ಅನುಮತಿಯನ್ನು ಪಡೆಯದೆ ಮತ್ತೊಂದು ಮದುವೆ ಒಪ್ಪಂದ ಮಾಡಿಕೊಳ್ಳಬಾರದು, ಅಂತೆಯೇ, ಯಾವುದೇ ಮಹಿಳಾ ಸರ್ಕಾರಿ ಉದ್ಯೋಗಿ, ತನ್ನ ಗಂಡ ಬದುಕಿರುವಾಗ ಸರ್ಕಾರದ ಅನುಮತಿ ಪಡೆಯದೆ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದ್ದು, ಇದು ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
ಅಸ್ಸಾಂ ನಾಗರಿಕ ಸೇವೆಗಳ (ನಡತೆ) ನಿಯಮಗಳು 1965 ರ ನಿಯಮ 26 ರ ನಿಬಂಧನೆಗಳ ಪ್ರಕಾರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅದು ಹೇಳಿದೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…