ರಾಷ್ಟ್ರೀಯ

ರಾಮಮಂದಿರಕ್ಕೆ ಬಾಂಬ್‌ ಬೆದರಿಕೆ; ಇಬ್ಬರು ಆರೋಪಿಗಳ ಬಂಧನ

ಕೆಲ ದಿನಗಳ ಹಿಂದೆ ಭಾರತೀಯ ಕಿಸಾನ್‌ ಮಂಚ್‌ ಮತ್ತು ಭಾರತೀಯ ಗೌ ಸೇವಾ ಪರಿಷತ್‌ನ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ರಾಮಮಂದಿರದ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಇ ಮೇಲ್‌ ಒಂದು ಬಂದಿತ್ತು. ರಾಮಮಂದಿರದ ಮೇಲೆ ಬಾಂಬ್‌ ದಾಳಿ ಮಾಡುವುದು ಮಾತ್ರವಲ್ಲದೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಎಸ್‌ಟಿಎಫ್‌ ಮುಖ್ಯಸ್ಥ ಅಮಿತಾಭ್‌ ಯಶ್‌ರನ್ನು ಸ್ಪೋಟಿಸಿ ಹತ್ಯೆ ಮಾಡುವುದಾಗಿಯೂ ಸಹ ಈ ಮೇಲ್‌ನಲ್ಲಿ ಬರೆಯಲಾಗಿತ್ತು.

ತಾನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ಹೀಗೆ ಬೆದರಿಕೆ ಇಮೇಲ್‌ ಬಂದ ಕೂಡಲೇ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ತನಿಖೆ ಆರಂಭಿಸಿದ್ದವು. ಎಸ್‌ಟಿಎಫ್‌ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಎಸ್‌ಟಿಎಫ್ ಪ್ರಕಾರ ಇಮೇಲ್‌ ಸ್ವೀಕರಿಸಿದ ಭಾರತೀಯ ಕಿಸಾನ್‌ ಮಂಚ್‌ ಮತ್ತು ಭಾರತೀಯ ಗೌ ಸೇವಾ ಪರಿಷತ್‌ನ ಅಧ್ಯಕ್ಷ ದೇವೇಂದ್ರ ತಿವಾರಿಯೇ ಈ ಕೃತ್ಯದ ಸಂಚು ರೂಪಿಸಿದ್ದರು ಎನ್ನಲಾಗಿದೆ. ಭದ್ರತೆ ಪಡೆದು ದೊಡ್ಡ ನಾಯಕರಾಗುವ ಕಾರಣಕ್ಕಾಗಿ ದೇವೇಂದ್ರ ತಿವಾರಿ ಈ ರೀತಿ ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ತಲೆ ಮರೆಸಿಕೊಂಡಿರುವ ದೇವೇಂದ್ರಗಾಗಿ ತೀವ್ರ ಹುಟುಕಾಟ ಶುರುವಾಗಿದೆ. ಇನ್ನು ಬಂಧಿತ ಆರೋಪಿಗಳಾದ ತಹರ್‌ ಸಿಂಗ್‌ ಹಾಗೂ ಓಂ ಪ್ರಕಾಶ್‌ ಮಿಶ್ರಾ ಈ ಇಬ್ಬರೂ ಸಹ ದೇವೇಂದ್ರ ತಿವಾರಿ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉದ್ಯೋಗಿಗಳೇ ಆಗಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago