ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ರಾಮಮಂದಿರಕ್ಕೆ ಬಾಲರಾಮನ ಮೂರ್ತಿ ತಲುಪಿದ್ದು, ಜನವರಿ 22ರಂದು ಈ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿವಿಧ ಕ್ಷೇತ್ರಗಳ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಆಮಂತ್ರಣ ಪತ್ರಿಕೆಯ ಮೇಲೆ ರಾಮಮಂದಿರದ ಲೋಗೊವನ್ನೂ ಸಹ ಮುದ್ರಿಸಲಾಗಿದೆ. ಸೂರ್ಯನ ಮಧ್ಯ ರಾಮನ ಭಾವಚಿತ್ರವಿದ್ದು, ಕೆಳಗೆ ಎರಡು ಬದಿಗಳಲ್ಲಿ ಹನುಮಂತ ನಮಸ್ಕರಿಸುತ್ತಾ ಕುಳಿತಿರುವ ಚಿತ್ರವಿದೆ. ಈ ಲೋಗೊವನ್ನು ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಎಂಬುವವರು ಡಿಸೈನ್ ಮಾಡಿದ್ದಾರೆ.
ಶ್ರೀ ರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೊವನ್ನು ತಯಾರಿಸಲು ಕರೆ ನೀಡಿತ್ತು. ದೇಶದ ವಿವಿಧ ಕಲಾವಿದರು ಲೋಗೊ ತಯಾರಿಸಿ ಕಳುಹಿಸಿದ್ದರು. ಹೀಗೆ ದೇಶದ ವಿವಿಧ ಕಲಾವಿದರು ಕಳುಹಿಸಿದ ಲೋಗೊಗಳನ್ನೆಲ್ಲಾ ಪರಿಶೀಲಿಸಿದ ಟ್ರಸ್ಟ್ ಕೊನೆಗೆ ರಮೇಶ್ ತಿಪ್ಪನೂರು ಕಳುಹಿಸಿದ ಲೋಗೊವನ್ನು ಅಂತಿಮಗೊಳಿಸಿದೆ. ಅಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ತಯಾರಿಸಿದ್ದು ಕನ್ನಡಿಗ ಎಂಬ ವಿಷಯ ತಿಳಿದು ಹೆಮ್ಮೆ ಪಟ್ಟಿದ್ದ ಕನ್ನಡಿಗರು ಇದೀಗ ಲೋಗೊವನ್ನೂ ಸಹ ಕನ್ನಡಿಗನೇ ತಯಾರಿಸಿದ್ದು ಎಂಬ ವಿಷಯಕ್ಕೆ ಮತ್ತಷ್ಟು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…