ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ರಾಮಮಂದಿರಕ್ಕೆ ಬಾಲರಾಮನ ಮೂರ್ತಿ ತಲುಪಿದ್ದು, ಜನವರಿ 22ರಂದು ಈ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿವಿಧ ಕ್ಷೇತ್ರಗಳ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಆಮಂತ್ರಣ ಪತ್ರಿಕೆಯ ಮೇಲೆ ರಾಮಮಂದಿರದ ಲೋಗೊವನ್ನೂ ಸಹ ಮುದ್ರಿಸಲಾಗಿದೆ. ಸೂರ್ಯನ ಮಧ್ಯ ರಾಮನ ಭಾವಚಿತ್ರವಿದ್ದು, ಕೆಳಗೆ ಎರಡು ಬದಿಗಳಲ್ಲಿ ಹನುಮಂತ ನಮಸ್ಕರಿಸುತ್ತಾ ಕುಳಿತಿರುವ ಚಿತ್ರವಿದೆ. ಈ ಲೋಗೊವನ್ನು ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಎಂಬುವವರು ಡಿಸೈನ್ ಮಾಡಿದ್ದಾರೆ.
ಶ್ರೀ ರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೊವನ್ನು ತಯಾರಿಸಲು ಕರೆ ನೀಡಿತ್ತು. ದೇಶದ ವಿವಿಧ ಕಲಾವಿದರು ಲೋಗೊ ತಯಾರಿಸಿ ಕಳುಹಿಸಿದ್ದರು. ಹೀಗೆ ದೇಶದ ವಿವಿಧ ಕಲಾವಿದರು ಕಳುಹಿಸಿದ ಲೋಗೊಗಳನ್ನೆಲ್ಲಾ ಪರಿಶೀಲಿಸಿದ ಟ್ರಸ್ಟ್ ಕೊನೆಗೆ ರಮೇಶ್ ತಿಪ್ಪನೂರು ಕಳುಹಿಸಿದ ಲೋಗೊವನ್ನು ಅಂತಿಮಗೊಳಿಸಿದೆ. ಅಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ತಯಾರಿಸಿದ್ದು ಕನ್ನಡಿಗ ಎಂಬ ವಿಷಯ ತಿಳಿದು ಹೆಮ್ಮೆ ಪಟ್ಟಿದ್ದ ಕನ್ನಡಿಗರು ಇದೀಗ ಲೋಗೊವನ್ನೂ ಸಹ ಕನ್ನಡಿಗನೇ ತಯಾರಿಸಿದ್ದು ಎಂಬ ವಿಷಯಕ್ಕೆ ಮತ್ತಷ್ಟು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…