ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ವಿವಿಧ ಕಾರ್ಯಕ್ರಮಗಳ ವೇಳಾಪಟ್ಟಿ

ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.

ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್‌ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್‌ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್‌ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.

ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್‌ ಇದ್ದು ಆ ಪಾಸ್‌ನಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.

ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

3 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

4 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

6 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

6 hours ago