ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ವಿವಿಧ ಕಾರ್ಯಕ್ರಮಗಳ ವೇಳಾಪಟ್ಟಿ

ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.

ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್‌ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್‌ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್‌ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.

ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್‌ ಇದ್ದು ಆ ಪಾಸ್‌ನಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.

ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

andolana

Recent Posts

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…

1 min ago

ತಂಬಾಕು ಬೆಳೆಗಾರರ ಸಮಸ್ಯೆ: ಜಿಎಸ್‌ಟಿ ಮೂಲಕ ತೆರಿಗೆ ಹಾಕುವ ಕೇಂದ್ರವು ಪರಿಹಾರ ನೀಡಲಿ ಎಂದ ಎಂ.ಲಕ್ಷ್ಮಣ್

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…

26 mins ago

RSS ವಿಷ ಸರ್ಪ ಎಂಬ ಖರ್ಗೆ ಹೇಳಿಕೆ ವಿಚಾರ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ…

40 mins ago

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…

51 mins ago

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

1 hour ago

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

2 hours ago