ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.
ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.
ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್ ಇದ್ದು ಆ ಪಾಸ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.
ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…