ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ವಿವಿಧ ಕಾರ್ಯಕ್ರಮಗಳ ವೇಳಾಪಟ್ಟಿ

ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.

ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್‌ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್‌ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್‌ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.

ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್‌ ಇದ್ದು ಆ ಪಾಸ್‌ನಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.

ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

andolana

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

9 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

10 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

10 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

11 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

12 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

13 hours ago