ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ವಿವಿಧ ಕಾರ್ಯಕ್ರಮಗಳ ವೇಳಾಪಟ್ಟಿ

ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.

ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್‌ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್‌ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್‌ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.

ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್‌ ಇದ್ದು ಆ ಪಾಸ್‌ನಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.

ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್‌
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

8 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

10 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

12 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

12 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago