ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ.
ಪ್ರಾಣಪ್ರತಿಷ್ಠೆ – ಮಧ್ಯಾಹ್ನ 12.15ರಿಂದ 12.45
ದೇವಾಲಯ ದರ್ಶನ- ಎಂಟ್ರಿ ಪಾಸ್ ಇರುವ ಭಕ್ತರಿಗೆ ಬೆಳಗ್ಗೆ 7ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 7ರವರೆಗೆ ದೇವಾಲಯ ದರ್ಶನ ಮಾಡಲು ಅವಕಾಶವಿರಲಿದೆ.
ಆರತಿಗಳು – ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ 3 ಆರತಿಗಳು ನಡೆಯಲಿದ್ದು, ಬೆಳಗ್ಗೆ 6.30ಕ್ಕೆ ಶೃಂಗಾರ್ / ಜಾಗರಣ ಆರತಿ, ಮಧ್ಯಾಹ್ನ 12 ಗಂಟೆಗೆ ಭೋಗ್ ಆರತಿ ಹಾಗೂ ಸಂಜೆ 7.30ಕ್ಕೆ ಸಂಧ್ಯಾ ಆರತಿ ನಡೆಯಲಿದೆ.
ಆಹ್ವಾನ ಇದ್ದ ಮಾತ್ರಕ್ಕೆ ಪ್ರವೇಶವಿಲ್ಲ: ಇನ್ನು ರಾಮಮಂದಿರ ಪ್ರವೇಶಿಸಲು ಕೇವಲ ಆಹ್ವಾನಪತ್ರಿಕೆ ಇದ್ದರೆ ಸಾಧ್ಯವಿಲ್ಲ. ಎಂಟ್ರಿ ಪಾಸ್ ಇದ್ದು ಆ ಪಾಸ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರವಷ್ಟೇ ಪ್ರವೇಶ ಸಿಗಲಿದೆ.
ಮೋದಿ ವೇಳಾಪಟ್ಟಿ
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10.55ಕ್ಕೆ ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55ರವರೆಗೆ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2ರವರೆಗೆ ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್
ಮಧ್ಯಾಹ್ನ 2.10ಕ್ಕೆ ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30ಕ್ಕೆ ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…