ರಾಷ್ಟ್ರೀಯ

ಶ್ರೀರಂಗಂ ದೇವಸ್ಥಾನದಲ್ಲಿ ಸಿಬ್ಬಂದಿ ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರ ನಡುವೆ ಕಿತ್ತಾಟ

ಶಬರಿಮಲೆಗೆ ತೆರಳುವ ಭಕ್ತಾದಿಗಳು ಸದ್ಯ ದಕ್ಷಿಣ ಭಾರತದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅದೇ ರೀತಿ ಇಂದು ( ಡಿಸೆಂಬರ್‌ 12 ) ಬೆಳ್ಳಂಬೆಳಗ್ಗೆ ಭಕ್ತವೃಂದವೊಂದು ತಮಿಳುನಾಡಿನ ತಿರುಚನಾಪಳ್ಳಿಯ ಶ್ರೀರಂಗಂ ದೇವಸ್ಥಾನಕ್ಕೂ ಸಹ ಭೇಟಿ ನೀಡಿತ್ತು.

ಆದರೆ ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಹಾಗೂ ಕೆಲ ಭಕ್ತರ ನಡುವೆ ಜಗಳವುಂಟಾಗಿದ್ದು ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟದವರೆಗೂ ತಲುಪಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ಈ ಕುರಿತು ಪ್ರತಿಕ್ರಿಯಿಸಿದ್ದು, “ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ಗುಂಪಿನ ಕೆಲವರು ಗಾಯತ್ರ ಮಂಟಪಲ್ಲಿದ್ದ ಹುಂಡಿಯನ್ನು ಕೈನಿಂದ ಕುಟ್ಟಿ ಶಬ್ದ ಮಾಡಿದ್ದರು. ಇದನ್ನು ಪ್ರಶ್ನಿಸಿದ ಸಿಬ್ಬಂದಿಯನ್ನೂ ಸಹ ನಿಂದಿಸಿದ್ದರು. ಅಷ್ಟೇ ಅಲ್ಲದೇ ದೇವಾಲಯದ ಒಳಗೆ ಪ್ರತಿಭಟಿಸಿದ ಈ ಗುಂಪು ದೇವಾಲಯದ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದೂ ಸಹ ಆರೋಪಿಸಲು ಆರಂಭಿಸಿದರು” ಎಂದು ಹೇಳಿಕೆ ನೀಡಿದರು.

ಆದರೆ ಭಕ್ತರ ಗುಂಪಿನಲ್ಲಿದ್ದ ಓರ್ವರು ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಗೊಳಗಾಗಿ ರಕ್ತ ಸುರಿಯುತ್ತಿರುವ ಅಯ್ಯಪ್ಪ ಮಾಲಾಧಾರಿಯ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ದೇವಾಲಯದ ಒಳಗೆ ʼಗೋವಿಂದ ಗೋವಿಂದʼ ಎಂಬ ಘೋಷಣೆ ಕೂಗಿದ್ದಕ್ಕೆ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ಸಿಬ್ಬಂದಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಅಲ್ಲದೇ ಪೊಲೀಸರು ತಮ್ಮನ್ನು ಕರೆದೊಯ್ದು ದೇವಾಲಯದ ಸಿಬ್ಬಂದಿಗಳಿಗೆ ಬೆಂಬಲ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹೀಗೆ ಎರಡೂ ಬಣಗಳು ಒಂದೊಂದು ಕಾರಣವನ್ನು ನೀಡಿದ್ದು, ಇಬ್ಬರಲ್ಲಿ ಯಾರದ್ದು ನಿಜ ಎಂಬುದು ತಿಳಿದುಬರಬೇಕಿದೆ. ಭಕ್ತಾದಿಗಳು ಮಾಡಿರುವ ಆರೋಪದ ಕುರಿತೂ ಸಹ ಪ್ರತಿಕ್ರಿಯಿಸಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ನಮ್ಮ ಸಿಬ್ಬಂದಿಗಳು ಯಾರ ಮೇಲೂ ಹಲ್ಲೆ ನಡೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

6 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

6 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

7 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

7 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

7 hours ago