ರಾಷ್ಟ್ರೀಯ

ಶ್ರೀರಂಗಂ ದೇವಸ್ಥಾನದಲ್ಲಿ ಸಿಬ್ಬಂದಿ ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರ ನಡುವೆ ಕಿತ್ತಾಟ

ಶಬರಿಮಲೆಗೆ ತೆರಳುವ ಭಕ್ತಾದಿಗಳು ಸದ್ಯ ದಕ್ಷಿಣ ಭಾರತದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅದೇ ರೀತಿ ಇಂದು ( ಡಿಸೆಂಬರ್‌ 12 ) ಬೆಳ್ಳಂಬೆಳಗ್ಗೆ ಭಕ್ತವೃಂದವೊಂದು ತಮಿಳುನಾಡಿನ ತಿರುಚನಾಪಳ್ಳಿಯ ಶ್ರೀರಂಗಂ ದೇವಸ್ಥಾನಕ್ಕೂ ಸಹ ಭೇಟಿ ನೀಡಿತ್ತು.

ಆದರೆ ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಹಾಗೂ ಕೆಲ ಭಕ್ತರ ನಡುವೆ ಜಗಳವುಂಟಾಗಿದ್ದು ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟದವರೆಗೂ ತಲುಪಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ಈ ಕುರಿತು ಪ್ರತಿಕ್ರಿಯಿಸಿದ್ದು, “ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ಗುಂಪಿನ ಕೆಲವರು ಗಾಯತ್ರ ಮಂಟಪಲ್ಲಿದ್ದ ಹುಂಡಿಯನ್ನು ಕೈನಿಂದ ಕುಟ್ಟಿ ಶಬ್ದ ಮಾಡಿದ್ದರು. ಇದನ್ನು ಪ್ರಶ್ನಿಸಿದ ಸಿಬ್ಬಂದಿಯನ್ನೂ ಸಹ ನಿಂದಿಸಿದ್ದರು. ಅಷ್ಟೇ ಅಲ್ಲದೇ ದೇವಾಲಯದ ಒಳಗೆ ಪ್ರತಿಭಟಿಸಿದ ಈ ಗುಂಪು ದೇವಾಲಯದ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದೂ ಸಹ ಆರೋಪಿಸಲು ಆರಂಭಿಸಿದರು” ಎಂದು ಹೇಳಿಕೆ ನೀಡಿದರು.

ಆದರೆ ಭಕ್ತರ ಗುಂಪಿನಲ್ಲಿದ್ದ ಓರ್ವರು ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಗೊಳಗಾಗಿ ರಕ್ತ ಸುರಿಯುತ್ತಿರುವ ಅಯ್ಯಪ್ಪ ಮಾಲಾಧಾರಿಯ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ದೇವಾಲಯದ ಒಳಗೆ ʼಗೋವಿಂದ ಗೋವಿಂದʼ ಎಂಬ ಘೋಷಣೆ ಕೂಗಿದ್ದಕ್ಕೆ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ಸಿಬ್ಬಂದಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಅಲ್ಲದೇ ಪೊಲೀಸರು ತಮ್ಮನ್ನು ಕರೆದೊಯ್ದು ದೇವಾಲಯದ ಸಿಬ್ಬಂದಿಗಳಿಗೆ ಬೆಂಬಲ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹೀಗೆ ಎರಡೂ ಬಣಗಳು ಒಂದೊಂದು ಕಾರಣವನ್ನು ನೀಡಿದ್ದು, ಇಬ್ಬರಲ್ಲಿ ಯಾರದ್ದು ನಿಜ ಎಂಬುದು ತಿಳಿದುಬರಬೇಕಿದೆ. ಭಕ್ತಾದಿಗಳು ಮಾಡಿರುವ ಆರೋಪದ ಕುರಿತೂ ಸಹ ಪ್ರತಿಕ್ರಿಯಿಸಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ನಮ್ಮ ಸಿಬ್ಬಂದಿಗಳು ಯಾರ ಮೇಲೂ ಹಲ್ಲೆ ನಡೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

2 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

2 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

3 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago