ರಾಷ್ಟ್ರೀಯ

ಶ್ರೀರಂಗಂ ದೇವಸ್ಥಾನದಲ್ಲಿ ಸಿಬ್ಬಂದಿ ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರ ನಡುವೆ ಕಿತ್ತಾಟ

ಶಬರಿಮಲೆಗೆ ತೆರಳುವ ಭಕ್ತಾದಿಗಳು ಸದ್ಯ ದಕ್ಷಿಣ ಭಾರತದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅದೇ ರೀತಿ ಇಂದು ( ಡಿಸೆಂಬರ್‌ 12 ) ಬೆಳ್ಳಂಬೆಳಗ್ಗೆ ಭಕ್ತವೃಂದವೊಂದು ತಮಿಳುನಾಡಿನ ತಿರುಚನಾಪಳ್ಳಿಯ ಶ್ರೀರಂಗಂ ದೇವಸ್ಥಾನಕ್ಕೂ ಸಹ ಭೇಟಿ ನೀಡಿತ್ತು.

ಆದರೆ ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಹಾಗೂ ಕೆಲ ಭಕ್ತರ ನಡುವೆ ಜಗಳವುಂಟಾಗಿದ್ದು ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟದವರೆಗೂ ತಲುಪಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ಈ ಕುರಿತು ಪ್ರತಿಕ್ರಿಯಿಸಿದ್ದು, “ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ಗುಂಪಿನ ಕೆಲವರು ಗಾಯತ್ರ ಮಂಟಪಲ್ಲಿದ್ದ ಹುಂಡಿಯನ್ನು ಕೈನಿಂದ ಕುಟ್ಟಿ ಶಬ್ದ ಮಾಡಿದ್ದರು. ಇದನ್ನು ಪ್ರಶ್ನಿಸಿದ ಸಿಬ್ಬಂದಿಯನ್ನೂ ಸಹ ನಿಂದಿಸಿದ್ದರು. ಅಷ್ಟೇ ಅಲ್ಲದೇ ದೇವಾಲಯದ ಒಳಗೆ ಪ್ರತಿಭಟಿಸಿದ ಈ ಗುಂಪು ದೇವಾಲಯದ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದೂ ಸಹ ಆರೋಪಿಸಲು ಆರಂಭಿಸಿದರು” ಎಂದು ಹೇಳಿಕೆ ನೀಡಿದರು.

ಆದರೆ ಭಕ್ತರ ಗುಂಪಿನಲ್ಲಿದ್ದ ಓರ್ವರು ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಗೊಳಗಾಗಿ ರಕ್ತ ಸುರಿಯುತ್ತಿರುವ ಅಯ್ಯಪ್ಪ ಮಾಲಾಧಾರಿಯ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ದೇವಾಲಯದ ಒಳಗೆ ʼಗೋವಿಂದ ಗೋವಿಂದʼ ಎಂಬ ಘೋಷಣೆ ಕೂಗಿದ್ದಕ್ಕೆ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ಸಿಬ್ಬಂದಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಅಲ್ಲದೇ ಪೊಲೀಸರು ತಮ್ಮನ್ನು ಕರೆದೊಯ್ದು ದೇವಾಲಯದ ಸಿಬ್ಬಂದಿಗಳಿಗೆ ಬೆಂಬಲ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹೀಗೆ ಎರಡೂ ಬಣಗಳು ಒಂದೊಂದು ಕಾರಣವನ್ನು ನೀಡಿದ್ದು, ಇಬ್ಬರಲ್ಲಿ ಯಾರದ್ದು ನಿಜ ಎಂಬುದು ತಿಳಿದುಬರಬೇಕಿದೆ. ಭಕ್ತಾದಿಗಳು ಮಾಡಿರುವ ಆರೋಪದ ಕುರಿತೂ ಸಹ ಪ್ರತಿಕ್ರಿಯಿಸಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ನಮ್ಮ ಸಿಬ್ಬಂದಿಗಳು ಯಾರ ಮೇಲೂ ಹಲ್ಲೆ ನಡೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

6 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

6 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago