ರಾಷ್ಟ್ರೀಯ

ಶ್ರೀರಂಗಂ ದೇವಸ್ಥಾನದಲ್ಲಿ ಸಿಬ್ಬಂದಿ ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರ ನಡುವೆ ಕಿತ್ತಾಟ

ಶಬರಿಮಲೆಗೆ ತೆರಳುವ ಭಕ್ತಾದಿಗಳು ಸದ್ಯ ದಕ್ಷಿಣ ಭಾರತದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅದೇ ರೀತಿ ಇಂದು ( ಡಿಸೆಂಬರ್‌ 12 ) ಬೆಳ್ಳಂಬೆಳಗ್ಗೆ ಭಕ್ತವೃಂದವೊಂದು ತಮಿಳುನಾಡಿನ ತಿರುಚನಾಪಳ್ಳಿಯ ಶ್ರೀರಂಗಂ ದೇವಸ್ಥಾನಕ್ಕೂ ಸಹ ಭೇಟಿ ನೀಡಿತ್ತು.

ಆದರೆ ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಹಾಗೂ ಕೆಲ ಭಕ್ತರ ನಡುವೆ ಜಗಳವುಂಟಾಗಿದ್ದು ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟದವರೆಗೂ ತಲುಪಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ಈ ಕುರಿತು ಪ್ರತಿಕ್ರಿಯಿಸಿದ್ದು, “ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ಗುಂಪಿನ ಕೆಲವರು ಗಾಯತ್ರ ಮಂಟಪಲ್ಲಿದ್ದ ಹುಂಡಿಯನ್ನು ಕೈನಿಂದ ಕುಟ್ಟಿ ಶಬ್ದ ಮಾಡಿದ್ದರು. ಇದನ್ನು ಪ್ರಶ್ನಿಸಿದ ಸಿಬ್ಬಂದಿಯನ್ನೂ ಸಹ ನಿಂದಿಸಿದ್ದರು. ಅಷ್ಟೇ ಅಲ್ಲದೇ ದೇವಾಲಯದ ಒಳಗೆ ಪ್ರತಿಭಟಿಸಿದ ಈ ಗುಂಪು ದೇವಾಲಯದ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದೂ ಸಹ ಆರೋಪಿಸಲು ಆರಂಭಿಸಿದರು” ಎಂದು ಹೇಳಿಕೆ ನೀಡಿದರು.

ಆದರೆ ಭಕ್ತರ ಗುಂಪಿನಲ್ಲಿದ್ದ ಓರ್ವರು ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಗೊಳಗಾಗಿ ರಕ್ತ ಸುರಿಯುತ್ತಿರುವ ಅಯ್ಯಪ್ಪ ಮಾಲಾಧಾರಿಯ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ದೇವಾಲಯದ ಒಳಗೆ ʼಗೋವಿಂದ ಗೋವಿಂದʼ ಎಂಬ ಘೋಷಣೆ ಕೂಗಿದ್ದಕ್ಕೆ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ಸಿಬ್ಬಂದಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ, ಅಲ್ಲದೇ ಪೊಲೀಸರು ತಮ್ಮನ್ನು ಕರೆದೊಯ್ದು ದೇವಾಲಯದ ಸಿಬ್ಬಂದಿಗಳಿಗೆ ಬೆಂಬಲ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹೀಗೆ ಎರಡೂ ಬಣಗಳು ಒಂದೊಂದು ಕಾರಣವನ್ನು ನೀಡಿದ್ದು, ಇಬ್ಬರಲ್ಲಿ ಯಾರದ್ದು ನಿಜ ಎಂಬುದು ತಿಳಿದುಬರಬೇಕಿದೆ. ಭಕ್ತಾದಿಗಳು ಮಾಡಿರುವ ಆರೋಪದ ಕುರಿತೂ ಸಹ ಪ್ರತಿಕ್ರಿಯಿಸಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಜಂಟಿ ಆಯುಕ್ತ ಸೇ ಮಾರಿಯಪ್ಪನ್‌ ನಮ್ಮ ಸಿಬ್ಬಂದಿಗಳು ಯಾರ ಮೇಲೂ ಹಲ್ಲೆ ನಡೆಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago