ರಾಷ್ಟ್ರೀಯ

ಮೈಸೂರಿನ ಕೃಷ್ಣ ಶಿಲೆಯಿಂದ ತಯಾರಾಯ್ತು ಅಯೋಧ್ಯೆಯ ಬಾಲ ರಾಮ ಮೂರ್ತಿ!

ಮೈಸೂರು: ಉತ್ತರ ಪ್ರದೇಶದಲ್ಲಿ ಸಜ್ಜಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಮುಂದಿನ ವರ್ಷ ಉದ್ಘಾಟನೆ ಆಗಲಿರುವ ರಾಮ ಮಂದಿರದಲ್ಲಿ ಪ್ರತಿಷ್ಟಾಪನೆಗೊಳಿಸಲು ಬಾಲ ಶ್ರೀರಾಮನ ಮೂರ್ತಿಯನ್ನು ಕೆತ್ತನೆ ಮಾಡಿ ಕಳುಹಿಸಿರುವುದು ಮೈಸೂರಿನ ಕೃಷ್ಣ ಶಿಲೆ ಎಂಬ ವೀಶೇಷ ಸಂಗತಿಯೊಂದು ಬೆಳಕಿಗೆ ಬಂದಿದೆ.

ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಜಮೀನಿನಲ್ಲಿ 6 ತಿಂಗಳ ಹಿಂದೆ ಸಿಕ್ಕ ಬೃಹತ್ ಕೃಷ್ಣಶಿಲೆಯಿಂದಲೇ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯ ಟ್ರಸ್ಟಿಗಳು ಈ ಸ್ಥಳಕ್ಕೆ ಬಂದು ಕಲ್ಲು ಪರೀಕ್ಷೆ ಮಾಡಿ ಕಲ್ಲನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿನ ಮಣ್ಣನ್ನು ಕೂಡ ಕುಂಭದಲ್ಲಿ ತೆಗೆದು ಕೊಂಡು ಹೋಗಿ ರಾಮ ಮಂದಿರದ ಗರ್ಭಗುಡಿಯ ಒಳಗಿಟ್ಟಿದ್ದಾರೆ ಎಂದು ಕೃಷ್ಣಶಿಲೆ ಅರ್ಪಿಸಿದ ಗುತ್ತಿಗೆದಾರ ಶ್ರೀನಿವಾಸ್‌ ತಿಳಿಸಿದ್ದಾರೆ.

ಈ ಸಂಬಂಧ ಖಾಸಗಿ ವಾಹಿನಿ ಜೊತೆಗೆ ಮಾತನಾಡಿರುವ ಅವರು, ಹಾರೋಹಳ್ಳಿಯಲ್ಲಿ ಜಮೀನು ಹದಗೊಳಿಸುತ್ತಿದ್ದ ವೇಳೆ ಆಕಾಶ ನೀಲಿ ಬಣ್ಣದ ಬೃಹತ್‌ ಬಂಡೆಯೊಂದು ಕಂಡಿತು. ರಾಮಮಂದಿರ ಗುರುಗಳೊಂದಿಗೆ ಸಂಪರ್ಕದಲ್ಲಿದ್ದ ವಿಶ್ವಕರ್ಮ ಸಮುದಾಯದ ಸುರೇಂದ್ರ ಎಂಬವರು ಶ್ರೀರಾಮನ ಮೂರ್ತಿಗೆ ಪರಿಶುದ್ಧ ಶಿಲೆ ಸಿಕ್ಕರೆ ಕೊಡುವಂತೆ ತಿಳಿಸಿದ್ದರು. ಪತ್ತೆಯಾದ ಕಲ್ಲನ್ನು ಮೂರು ಭಾಗ ಮಾಡಿ ಮತ್ತೊಂದು ಸ್ಥಳದಲ್ಲಿ ಇರಿಸಲಾಯಿತು. ನಂತರ ಸುರೇಂದ್ರ ವಿಶ್ವಕರ್ಮ ಎಂಬವರು ಅದನ್ನು ಇಷ್ಟಪಟ್ಟು, ವೈಜ್ಞಾನಿಕ ಪರೀಕ್ಷೆ ಮಾಡಿಸಿದ ಬಳಿಕ ಮೂರ್ತಿ ನಿರ್ಮಾಣಕ್ಕೆ ಶಿಲೆಯನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟರು.

ಶ್ರೀರಾಮ-ಸೀತಾ ಮಾತೆ ಬಳಿಕ, ಲಕ್ಷ್ಮಣ, ಭರತ, ಶತ್ರುಜ್ಞ ವಿಗ್ರಹಗಳ ಕೆತ್ತನೆಗಳಿಗೂ ಕೃಷ್ಣಶಿಲೆಯನ್ನು ಕಳುಹಿಸಿಕೊಡಲಾಯಿತು. ಇದೆಲ್ಲ ನಮ್ಮ ಪೂರ್ವಜರ ಪುಣ್ಯವೆಂದೇ ನಾವು ಭಾವಿಸುತ್ತೇವೆ ಎಂದು ಶ್ರೀನಿವಾಸ್‌ ನೆನೆದರು.

ಜನವರಿ 22ರಂದು ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶುಕ್ರವಾರ (ಇಂದು) ಬಾಲ ಶ್ರೀರಾಮ ಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಟ್ಟು ಆಯ್ಕೆಗೆ ಮೂರು ಮೂರ್ತಿಗಳನ್ನು ಕೆತ್ತಲಾಗಿದ್ದು, ರಾಮ ಮಂದಿರ ಟ್ರಸ್ಟ್ ಸಭೆಯ ಬಳಿಕ ಮೂರ್ತಿಯನ್ನ ಆಯ್ಕೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಇಬ್ಬರು ಕರ್ನಾಟಕ‌ ಶಿಲ್ಪಿಗಳು, ಓರ್ವ ರಾಜಸ್ಥಾನ ಮೂಲದ ಶಿಲ್ಪಿಯಿಂದ ನಿರ್ಮಾಣಗೊಂಡಿರುವ ಕರ್ನಾಟಕ ಮೂಲದ ಬಾಲರಾಮನ ಮೂರ್ತಿ ಸಹ ಇದೆ. ಈ ಮೂರ್ತಿ ಪ್ರತಿಷ್ಟಾಪನೆಗೆ ಆಯ್ಕೆಯಾಗುವ ಮೂಲಕ ಅಯೋಧ್ಯೆ ರಾಮ ಮಂದಿರದಲ್ಲಿ ಕರ್ನಾಟಕದ ನಂಟು ಉಳಿಯುತ್ತಾ? ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

43 mins ago

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

1 hour ago

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

2 hours ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

3 hours ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

3 hours ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

3 hours ago