ರಾಷ್ಟ್ರೀಯ

ಮೈಸೂರಿನ ಕೃಷ್ಣ ಶಿಲೆಯಿಂದ ತಯಾರಾಯ್ತು ಅಯೋಧ್ಯೆಯ ಬಾಲ ರಾಮ ಮೂರ್ತಿ!

ಮೈಸೂರು: ಉತ್ತರ ಪ್ರದೇಶದಲ್ಲಿ ಸಜ್ಜಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಮುಂದಿನ ವರ್ಷ ಉದ್ಘಾಟನೆ ಆಗಲಿರುವ ರಾಮ ಮಂದಿರದಲ್ಲಿ ಪ್ರತಿಷ್ಟಾಪನೆಗೊಳಿಸಲು ಬಾಲ ಶ್ರೀರಾಮನ ಮೂರ್ತಿಯನ್ನು ಕೆತ್ತನೆ ಮಾಡಿ ಕಳುಹಿಸಿರುವುದು ಮೈಸೂರಿನ ಕೃಷ್ಣ ಶಿಲೆ ಎಂಬ ವೀಶೇಷ ಸಂಗತಿಯೊಂದು ಬೆಳಕಿಗೆ ಬಂದಿದೆ.

ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಜಮೀನಿನಲ್ಲಿ 6 ತಿಂಗಳ ಹಿಂದೆ ಸಿಕ್ಕ ಬೃಹತ್ ಕೃಷ್ಣಶಿಲೆಯಿಂದಲೇ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯ ಟ್ರಸ್ಟಿಗಳು ಈ ಸ್ಥಳಕ್ಕೆ ಬಂದು ಕಲ್ಲು ಪರೀಕ್ಷೆ ಮಾಡಿ ಕಲ್ಲನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿನ ಮಣ್ಣನ್ನು ಕೂಡ ಕುಂಭದಲ್ಲಿ ತೆಗೆದು ಕೊಂಡು ಹೋಗಿ ರಾಮ ಮಂದಿರದ ಗರ್ಭಗುಡಿಯ ಒಳಗಿಟ್ಟಿದ್ದಾರೆ ಎಂದು ಕೃಷ್ಣಶಿಲೆ ಅರ್ಪಿಸಿದ ಗುತ್ತಿಗೆದಾರ ಶ್ರೀನಿವಾಸ್‌ ತಿಳಿಸಿದ್ದಾರೆ.

ಈ ಸಂಬಂಧ ಖಾಸಗಿ ವಾಹಿನಿ ಜೊತೆಗೆ ಮಾತನಾಡಿರುವ ಅವರು, ಹಾರೋಹಳ್ಳಿಯಲ್ಲಿ ಜಮೀನು ಹದಗೊಳಿಸುತ್ತಿದ್ದ ವೇಳೆ ಆಕಾಶ ನೀಲಿ ಬಣ್ಣದ ಬೃಹತ್‌ ಬಂಡೆಯೊಂದು ಕಂಡಿತು. ರಾಮಮಂದಿರ ಗುರುಗಳೊಂದಿಗೆ ಸಂಪರ್ಕದಲ್ಲಿದ್ದ ವಿಶ್ವಕರ್ಮ ಸಮುದಾಯದ ಸುರೇಂದ್ರ ಎಂಬವರು ಶ್ರೀರಾಮನ ಮೂರ್ತಿಗೆ ಪರಿಶುದ್ಧ ಶಿಲೆ ಸಿಕ್ಕರೆ ಕೊಡುವಂತೆ ತಿಳಿಸಿದ್ದರು. ಪತ್ತೆಯಾದ ಕಲ್ಲನ್ನು ಮೂರು ಭಾಗ ಮಾಡಿ ಮತ್ತೊಂದು ಸ್ಥಳದಲ್ಲಿ ಇರಿಸಲಾಯಿತು. ನಂತರ ಸುರೇಂದ್ರ ವಿಶ್ವಕರ್ಮ ಎಂಬವರು ಅದನ್ನು ಇಷ್ಟಪಟ್ಟು, ವೈಜ್ಞಾನಿಕ ಪರೀಕ್ಷೆ ಮಾಡಿಸಿದ ಬಳಿಕ ಮೂರ್ತಿ ನಿರ್ಮಾಣಕ್ಕೆ ಶಿಲೆಯನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟರು.

ಶ್ರೀರಾಮ-ಸೀತಾ ಮಾತೆ ಬಳಿಕ, ಲಕ್ಷ್ಮಣ, ಭರತ, ಶತ್ರುಜ್ಞ ವಿಗ್ರಹಗಳ ಕೆತ್ತನೆಗಳಿಗೂ ಕೃಷ್ಣಶಿಲೆಯನ್ನು ಕಳುಹಿಸಿಕೊಡಲಾಯಿತು. ಇದೆಲ್ಲ ನಮ್ಮ ಪೂರ್ವಜರ ಪುಣ್ಯವೆಂದೇ ನಾವು ಭಾವಿಸುತ್ತೇವೆ ಎಂದು ಶ್ರೀನಿವಾಸ್‌ ನೆನೆದರು.

ಜನವರಿ 22ರಂದು ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶುಕ್ರವಾರ (ಇಂದು) ಬಾಲ ಶ್ರೀರಾಮ ಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಟ್ಟು ಆಯ್ಕೆಗೆ ಮೂರು ಮೂರ್ತಿಗಳನ್ನು ಕೆತ್ತಲಾಗಿದ್ದು, ರಾಮ ಮಂದಿರ ಟ್ರಸ್ಟ್ ಸಭೆಯ ಬಳಿಕ ಮೂರ್ತಿಯನ್ನ ಆಯ್ಕೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಇಬ್ಬರು ಕರ್ನಾಟಕ‌ ಶಿಲ್ಪಿಗಳು, ಓರ್ವ ರಾಜಸ್ಥಾನ ಮೂಲದ ಶಿಲ್ಪಿಯಿಂದ ನಿರ್ಮಾಣಗೊಂಡಿರುವ ಕರ್ನಾಟಕ ಮೂಲದ ಬಾಲರಾಮನ ಮೂರ್ತಿ ಸಹ ಇದೆ. ಈ ಮೂರ್ತಿ ಪ್ರತಿಷ್ಟಾಪನೆಗೆ ಆಯ್ಕೆಯಾಗುವ ಮೂಲಕ ಅಯೋಧ್ಯೆ ರಾಮ ಮಂದಿರದಲ್ಲಿ ಕರ್ನಾಟಕದ ನಂಟು ಉಳಿಯುತ್ತಾ? ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago