ರಾಷ್ಟ್ರೀಯ

ಮೈಸೂರಿನ ಕೃಷ್ಣ ಶಿಲೆಯಿಂದ ತಯಾರಾಯ್ತು ಅಯೋಧ್ಯೆಯ ಬಾಲ ರಾಮ ಮೂರ್ತಿ!

ಮೈಸೂರು: ಉತ್ತರ ಪ್ರದೇಶದಲ್ಲಿ ಸಜ್ಜಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಮುಂದಿನ ವರ್ಷ ಉದ್ಘಾಟನೆ ಆಗಲಿರುವ ರಾಮ ಮಂದಿರದಲ್ಲಿ ಪ್ರತಿಷ್ಟಾಪನೆಗೊಳಿಸಲು ಬಾಲ ಶ್ರೀರಾಮನ ಮೂರ್ತಿಯನ್ನು ಕೆತ್ತನೆ ಮಾಡಿ ಕಳುಹಿಸಿರುವುದು ಮೈಸೂರಿನ ಕೃಷ್ಣ ಶಿಲೆ ಎಂಬ ವೀಶೇಷ ಸಂಗತಿಯೊಂದು ಬೆಳಕಿಗೆ ಬಂದಿದೆ.

ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಜಮೀನಿನಲ್ಲಿ 6 ತಿಂಗಳ ಹಿಂದೆ ಸಿಕ್ಕ ಬೃಹತ್ ಕೃಷ್ಣಶಿಲೆಯಿಂದಲೇ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯ ಟ್ರಸ್ಟಿಗಳು ಈ ಸ್ಥಳಕ್ಕೆ ಬಂದು ಕಲ್ಲು ಪರೀಕ್ಷೆ ಮಾಡಿ ಕಲ್ಲನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿನ ಮಣ್ಣನ್ನು ಕೂಡ ಕುಂಭದಲ್ಲಿ ತೆಗೆದು ಕೊಂಡು ಹೋಗಿ ರಾಮ ಮಂದಿರದ ಗರ್ಭಗುಡಿಯ ಒಳಗಿಟ್ಟಿದ್ದಾರೆ ಎಂದು ಕೃಷ್ಣಶಿಲೆ ಅರ್ಪಿಸಿದ ಗುತ್ತಿಗೆದಾರ ಶ್ರೀನಿವಾಸ್‌ ತಿಳಿಸಿದ್ದಾರೆ.

ಈ ಸಂಬಂಧ ಖಾಸಗಿ ವಾಹಿನಿ ಜೊತೆಗೆ ಮಾತನಾಡಿರುವ ಅವರು, ಹಾರೋಹಳ್ಳಿಯಲ್ಲಿ ಜಮೀನು ಹದಗೊಳಿಸುತ್ತಿದ್ದ ವೇಳೆ ಆಕಾಶ ನೀಲಿ ಬಣ್ಣದ ಬೃಹತ್‌ ಬಂಡೆಯೊಂದು ಕಂಡಿತು. ರಾಮಮಂದಿರ ಗುರುಗಳೊಂದಿಗೆ ಸಂಪರ್ಕದಲ್ಲಿದ್ದ ವಿಶ್ವಕರ್ಮ ಸಮುದಾಯದ ಸುರೇಂದ್ರ ಎಂಬವರು ಶ್ರೀರಾಮನ ಮೂರ್ತಿಗೆ ಪರಿಶುದ್ಧ ಶಿಲೆ ಸಿಕ್ಕರೆ ಕೊಡುವಂತೆ ತಿಳಿಸಿದ್ದರು. ಪತ್ತೆಯಾದ ಕಲ್ಲನ್ನು ಮೂರು ಭಾಗ ಮಾಡಿ ಮತ್ತೊಂದು ಸ್ಥಳದಲ್ಲಿ ಇರಿಸಲಾಯಿತು. ನಂತರ ಸುರೇಂದ್ರ ವಿಶ್ವಕರ್ಮ ಎಂಬವರು ಅದನ್ನು ಇಷ್ಟಪಟ್ಟು, ವೈಜ್ಞಾನಿಕ ಪರೀಕ್ಷೆ ಮಾಡಿಸಿದ ಬಳಿಕ ಮೂರ್ತಿ ನಿರ್ಮಾಣಕ್ಕೆ ಶಿಲೆಯನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟರು.

ಶ್ರೀರಾಮ-ಸೀತಾ ಮಾತೆ ಬಳಿಕ, ಲಕ್ಷ್ಮಣ, ಭರತ, ಶತ್ರುಜ್ಞ ವಿಗ್ರಹಗಳ ಕೆತ್ತನೆಗಳಿಗೂ ಕೃಷ್ಣಶಿಲೆಯನ್ನು ಕಳುಹಿಸಿಕೊಡಲಾಯಿತು. ಇದೆಲ್ಲ ನಮ್ಮ ಪೂರ್ವಜರ ಪುಣ್ಯವೆಂದೇ ನಾವು ಭಾವಿಸುತ್ತೇವೆ ಎಂದು ಶ್ರೀನಿವಾಸ್‌ ನೆನೆದರು.

ಜನವರಿ 22ರಂದು ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶುಕ್ರವಾರ (ಇಂದು) ಬಾಲ ಶ್ರೀರಾಮ ಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಟ್ಟು ಆಯ್ಕೆಗೆ ಮೂರು ಮೂರ್ತಿಗಳನ್ನು ಕೆತ್ತಲಾಗಿದ್ದು, ರಾಮ ಮಂದಿರ ಟ್ರಸ್ಟ್ ಸಭೆಯ ಬಳಿಕ ಮೂರ್ತಿಯನ್ನ ಆಯ್ಕೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಇಬ್ಬರು ಕರ್ನಾಟಕ‌ ಶಿಲ್ಪಿಗಳು, ಓರ್ವ ರಾಜಸ್ಥಾನ ಮೂಲದ ಶಿಲ್ಪಿಯಿಂದ ನಿರ್ಮಾಣಗೊಂಡಿರುವ ಕರ್ನಾಟಕ ಮೂಲದ ಬಾಲರಾಮನ ಮೂರ್ತಿ ಸಹ ಇದೆ. ಈ ಮೂರ್ತಿ ಪ್ರತಿಷ್ಟಾಪನೆಗೆ ಆಯ್ಕೆಯಾಗುವ ಮೂಲಕ ಅಯೋಧ್ಯೆ ರಾಮ ಮಂದಿರದಲ್ಲಿ ಕರ್ನಾಟಕದ ನಂಟು ಉಳಿಯುತ್ತಾ? ಎಂಬುದನ್ನು ಕಾದುನೋಡಬೇಕಿದೆ.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago