ರಾಷ್ಟ್ರೀಯ

ರಾಮ ಮಂದಿರದಿಂದ 84 ಕಿ.ಮೀ ದೂರದವರೆಗೂ ಮದ್ಯ ಮಾರಾಟ ನಿಷೇಧ!

ಉತ್ತರ ಪ್ರದೇಶ: ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಯುಪಿ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿ ನೀಡಿದರು. ಅಯೋಧ್ಯೆಯ 84 ಕೋಸಿ ಪರಿಕ್ರಮ ಮಾರ್ಗವನ್ನು ಮದ್ಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೆ ಅದಾಗಲೇ ಇರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಲಾಗುವುದು ಎಂದರು.

ಅಯೋಧ್ಯೆಯೊಂದಿಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ, ಸುಲ್ತಾನ್‌ಪುರ ಪ್ರದೇಶಗಳನ್ನು ಶ್ರೀರಾಮ ಜನ್ಮಭೂಮಿಯ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಸೇರಿಸಲಾಗುವುದು. ಪರಿಕ್ರಮ ಮಾರ್ಗದಲ್ಲಿ ಮದ್ಯದಂಗಡಿ ಇರುವುದಿಲ್ಲ. ಈಗಾಗಲೇ ಇರುವ ಎಲ್ಲ ಅಂಗಡಿಗಳನ್ನು ತೆಗೆದುಹಾಕಲಾಗುವುದು. ಪರಿಕ್ರಮ ಪ್ರದೇಶದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ವಾಸ್ತವವಾಗಿ, ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಅವರು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿಯಾಗಲು ಬಂದಿದ್ದರು. ಸಭೆಯ ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ಕ್ಷೇತ್ರವನ್ನು ಈಗಾಗಲೇ ಮದ್ಯ ಮುಕ್ತ ಮಾಡಲಾಗಿದೆ. ಇದೀಗ 84 ಕೋಸ್ ಪರಿಕ್ರಮ ಮಾರ್ಗದಿಂದಲೂ ಮದ್ಯದಂಗಡಿಗಳನ್ನು ತೆಗೆಯಲಾಗುವುದು. ಇದಕ್ಕಾಗಿ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ.

ಇಡೀ ಅಯೋಧ್ಯೆ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಈ ನಿಷೇಧ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮಾತ್ರ ಅನ್ವಯಿಸುತ್ತದೆ. ಈ ಭಾಗದಲ್ಲಿ 500ಕ್ಕೂ ಹೆಚ್ಚು ಮದ್ಯದಂಗಡಿಗಳಿವೆ ಎಂದು ಹೇಳಲಾಗುತ್ತಿದೆ. ಮದ್ಯ ನಿಷೇಧದ ಘೋಷಣೆಯ ನಂತರ ಈ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಆದೇಶ ಹೊರಡಿಸಲಾಗಿದೆ. ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

5 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago